ಹಣದೊಂದಿಗೆ ಪೊಲೀಸರು 
ದೇಶ

ಚೆನ್ನೈ: ಪೊಲೀಸರು ಬೆನ್ನತ್ತಿದ್ದರಿಂದ 1.5 ಕೋಟಿ ಹಣವನ್ನು ರಸ್ತೆಗೆ ಎಸೆದು ಪರಾರಿಯಾದ ದರೋಡೆಕೋರರು

ಅಣ್ಣಾ ಸಲೈನಲ್ಲಿನ ಸ್ಪೆನ್ಸರ್ಸ್ ಪ್ಲಾಜಾ ಮಾಲ್ ಮಾಲೀಕರ ಮನೆಯಿಂದ ಕಳ್ಳತನ ಮಾಡಿದ್ದ ದರೋಡೆಕೋರರನ್ನು ಪೊಲೀಸರು ಬೆನ್ನತ್ತಿದ್ದರಿಂದ ಸುಮಾರು 1. 56 ಕೋಟಿ ರೂಪಾಯಿಯನ್ನು ರಸ್ತೆ ಮೇಲೆಯೇ ಎಸೆದು ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ

ಚೆನ್ನೈ:  ಅಣ್ಣಾ ಸಲೈನಲ್ಲಿನ ಸ್ಪೆನ್ಸರ್ಸ್ ಪ್ಲಾಜಾ ಮಾಲ್ ಮಾಲೀಕರ ಮನೆಯಿಂದ ಕಳ್ಳತನ ಮಾಡಿದ್ದ ದರೋಡೆಕೋರರನ್ನು ಪೊಲೀಸರು ಬೆನ್ನತ್ತಿದ್ದರಿಂದ  ಸುಮಾರು 1. 56 ಕೋಟಿ ರೂಪಾಯಿಯನ್ನು  ರಸ್ತೆ ಮೇಲೆಯೇ  ಎಸೆದು ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ

ಬೆಳಗ್ಗೆ 2.30 ರ ಸುಮಾರಿನಲ್ಲಿ ಬೈಕಿನಲ್ಲಿ ಬಂದಿದ್ದ ಅಪರಿಚಿತ ದರೋಡೆಕೋರರು  ಆ ಪ್ರದೇಶದಲ್ಲಿ ಓಡಾಡುತ್ತಿದುದ್ದನ್ನು ಪೊಲೀಸರು ನೋಡಿದ್ದಾರೆ. ರಾತ್ರಿ ವೇಳೆ ಗಸ್ತು ತಿರುಗುವಾಗ ಅದೇ  ಸ್ಥಳದಲ್ಲಿ ನಾಲ್ಕು ಬಾರಿ ದರೋಡೆಕೋರರನ್ನು ಗಮನಿಸಿದ್ದರಿಂದ ಶಂಕೆ ಉಂಟಾಗಿ ಅವರನ್ನು ಬೆನ್ನತ್ತಿದ್ದಾಗ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಬೈಕ್ ಮೇಲೆ ಇಟ್ಟಿದ್ದ ಮೂರು ಬ್ಯಾಗ್ ಗಳ ಪೈಕಿ ಒಂದು ಬೈಕಿನಿಂದ ಕೆಳಗೆ ಬಿದಿದ್ದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಿತರ ಎರಡು ಬ್ಯಾಗ್ ಗಳನ್ನು ರಸ್ತೆಯಲ್ಲಿಯೇ  ಎಸೆದು ದರೋಡೆಕೋರರು ಪರಾರಿಯಾಗಿದ್ದಾರೆ.  ಆ ಬ್ಯಾಗ್ ನಲ್ಲಿ 1 ಕೋಟಿ 56 ಲಕ್ಷ ರೂಪಾಯಿ  ಪತ್ತೆಯಾಗಿದೆ.

ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಉದ್ಯಮಿ ಎಂ. ಬಾಲಸುಬ್ರಮಣ್ಯಂ ಅವರ ಮನೆಯಿಂದ 1.56 ಕೋಟಿ ರೂಪಾಯಿ ಕಳ್ಳತನವಾಗಿರುವ ಬಗ್ಗೆ ಸೈದಾಪೆೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಬಾಲಸುಬ್ರಮಣ್ಯಂ  ಇತರರ ಪಾಲುದಾರಿಕೆಯಲ್ಲಿ 1987ರಲ್ಲಿ ಸ್ಪೆನ್ಸರ್ಸ್  ಪ್ಲಾಜಾ ಸ್ಥಾಪಿಸಿದ್ದರು. ನಂತರ ಅದರಿಂದ ಅವರು ಹೊರಗಡೆ ಬಂದಿದ್ದರು ಎಂಬುದು ತಿಳಿದುಬಂದಿದೆ.

ಬಾಲಸುಬ್ರಮಣ್ಯಂ  5 ಕೋಟಿ ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿದ್ದರು. ಅದರಲ್ಲಿ ಉಳಿದದ್ದು ಈ ಹಣವಾಗಿದೆ. ಮನೆ ಕಿಟಕಿ ಮೂಲಕ ಒಳಗಡೆ  ನುಗ್ಗಿ ದರೋಡೆಕೋರರು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT