ಸಾಂದರ್ಭಿಕ ಚಿತ್ರ 
ದೇಶ

ಮಗಳನ್ನು ಅಂಗನವಾಡಿಗೆ ಸೇರಿಸಿ ಮಾದರಿಯಾದ ಐಎಎಸ್ ಅಧಿಕಾರಿ: ರಾಜ್ಯಪಾಲರ ಮೆಚ್ಚುಗೆ!

ಸರ್ಕಾರಿ ಶಾಲೆ ಅಂದರೆ ಮೂಗು ಮುರಿಯುವವರೇ ಹೆಚ್ಚು. ತಮ್ಮ ಮಕ್ಕಳಿದೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಲಿ ಅನ್ನೋದು ಎಲ್ಲಾ ಪೋಷಕರ ಬಯಕೆ, ಹೀಗಾಗಿ ಹೆಚ್ಚಿನ ...

ಭೂಪಾಲ್: ಸರ್ಕಾರಿ ಶಾಲೆ ಅಂದರೆ ಮೂಗು ಮುರಿಯುವವರೇ ಹೆಚ್ಚು. ತಮ್ಮ ಮಕ್ಕಳಿದೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಲಿ ಅನ್ನೋದು ಎಲ್ಲಾ ಪೋಷಕರ ಬಯಕೆ, ಹೀಗಾಗಿ ಹೆಚ್ಚಿನ ಹಣ ತೆತ್ತು ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ, 
ಆದರೆ ಇಲ್ಲೊಬ್ಬರು ಐಎಎಸ್ ಅಧಿಕಾರಿ ಒಬ್ಬರು ತಮ್ಮ ಮಗಳನ್ನ ಸರ್ಕಾರಿ ಅಂಗನವಾಡಿಗೆ ಸೇರಿಸಿದ್ದಾರೆ. ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರಿಗೆ ಮಾದರಿಯಾಗಿದ್ದಾರೆ.
ಮಧ್ಯಪ್ರದೇಶದ ಕಟ್ನಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಪಂಕಜ್​ಜೈನ್ ತಮ್ಮ ಮಗಳನ್ನ ಯಾವುದೇ ಖಾಸಗಿ​ಶಾಲೆಯ ಎಲ್​ಕೆಜಿ, ಯುಕೆಜಿಗೆ ಅಡ್ಮಿಷನ್​ಮಾಡದೇ ಸರ್ಕಾರಿ ಅಂಗನವಾಡಿ ಶಾಲೆಗೆ ಸೇರಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಈ ಪ್ರದೇಶದಲ್ಲಿ ಎಲ್ಲ ಪ್ರೈವೇಟ್​ ಪ್ಲೇ ಸ್ಕೂಲ್​ಗಳಿಗಿಂತ ಅಂಗನವಾಡಿ ಚೆನ್ನಾಗಿದೆ.ಸರ್ಕಾರಿ ಅಧಿಕಾರಿಯಾಗಿರುವ ನನ್ನ ತರಹದವರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗಳಿಗೆ ಕುಳುಹಿಸುವುದರಿಂದ ಅಲ್ಲಿಯ ಕೆಟ್ಟ ಪರಿಸ್ಥಿತಿಗಳು ತಾವಾಗಿಯೇ ಸುಧಾರಣೆ ಕಾಣುತ್ತವೆ. ಒಂದು ವೇಳೆ ಯಾವುದಾದ್ರೂ ಸಮಸ್ಯೆ ಇದ್ದರೆ ಅದು ಬೇಗ ನಮಗೆ ಗೊತ್ತಾಗುತ್ತೆ. ಇದರಿಂದ ಅವುಗಳ ಬಗ್ಗೆ ಬೇಗನೆ ಪರಿಹಾರ ಕಂಡುಕೊಳ್ಳಬಹುದು ಅಂತಾ ಐಎಎಸ್​ ಆಫೀಸರ್ ಪಂಕಜ್​ಜೈನ್​ ಹೇಳುತ್ತಾರೆ.
ಈ ವಿಷಯ ರಾಜ್ಯಪಾಲರಾಗಿರುವ ಆನಂದಿಬೆನ್​ಗೆ ತಿಳಿದು ಪಂಕಜ್​ಜೈನ್​ಗೆ ಪತ್ರವೊಂದನ್ನ ಬರೆದು ಶುಭಾಶಯ ಕೋರಿದ್ದಾರೆ. ಸದ್ಯ ಈ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಸಾರ್ವಜನಿಕ ಅಧಿಕಾರಿ ಸಮಾಜಕ್ಕೆ ಮಾದರಿಯಾಗಿರಬೇಕು. ಇದನ್ನ ನೀವು ತೋರಿಸಿಕೊಟ್ಟಿದ್ದೀರಿ. ಇದರಿಂದ ಸಮಾಜ ನಿಮ್ಮಂತೆಯಾಗಿ, ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ, ಸೇವೆಗಳನ್ನ ಹೆಚ್ಚಿಸುತ್ತದೆ. ಅಲ್ಲದೇ ಇದರಿಂದ ಸರ್ಕಾರಿ ಯೋಜನೆಗಳು ಸರಿಯಾಗಿ ರಿಲೀಸ್​ ಆಗುತ್ತವೆ. ಹೀಗೆ ನಿಮ್ಮ ನಿಷ್ಠೆ, ಕಾರ್ಯ ಮುಂದುವರೆಸಿರಿ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT