2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ 
ದೇಶ

2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ

ಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಇದ್ದಾರೆ.

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಗುರುವಾರ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸುವ ಮೋದಿ ಮಾಜಿ ರಾಷ್ಟ್ರಪತಿಯನ್ನು  "ರಾಜನೀತಿಜ್ಞ" ಎಂದು ಬಣ್ಣಿಸಿದ್ದಾರೆ.
"ಪ್ರಣಬ್ ದಾ ಅವರೊಂದಿಗಿನ ಭೇಟಿ ಎಂದಿಗೂ ಸಮೃದ್ದ ಅನುಭವವನ್ನು ಒಳಗೊಂಡಿರುತ್ತದೆ. ಅವರ ಜ್ಞಾನ ಮತ್ತು ಒಳನೋಟಗಳಿಗೆ ಸಾಟಿ ಇಲ್ಲ. ಅವರು ರಾಷ್ಟ್ರವು ಎಂದಿಗೂ ಮರೆಯಲಾಗದ ಕೊಡುಗೆ ನೀಡಿದ್ದಾರೆ." ಮೋದಿ  ಟ್ವೀಟ್ ಮಾಡಿದ್ದಾರೆ.
"ಇಂದು ನಮ್ಮ ಭೇಟಿಯಲ್ಲಿ ಅವರ ಆಶೀರ್ವಾದವನ್ನು ಬೇಡಿದ್ದೆನು" ಅವರು ಹೇಳಿದರು.
ಜನವರಿಯಲ್ಲಿ ಮೋದಿ ನೇತೃತ್ವದ ಸರ್ಕಾರದ ಶಿಫಾರಸಿನ ಮೇರೆಗೆ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರಶಸ್ತಿ ಲಭಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್