ಸಂಗ್ರಹ ಚಿತ್ರ 
ದೇಶ

ಕಾಶ್ಮೀರ: ಅನಂತ್ ನಾಗ್ ನಲ್ಲಿ ಇಬ್ಬರು ಉಗ್ರರ ಎನ್ಕೌಂಟರ್, ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಬಂಧನ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು  ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.
ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಅನಂತನಾಗ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಈ ಎನ್ಕೌಂಟರ್ ನಡೆದಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.  ಅನಂತ್ ನಾಗ್ ನ ಕಚ್ವಾನ್ ಅರಣ್ಯದಲ್ಲಿ  ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ, ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ)  ರಾಜ್ಯ ಪೊಲೀಸ್ ಮತ್ತು  ಸಿಆರ್ ಪಿಎಫ್ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.  ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು  ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದ್ದಾರೆ. 
ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಗುಂಡಿನ ಚಕಮಕಿಯಾಗಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಇಬ್ಬರು ಉಗ್ರರ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಶರಣಾಗತಿ
ಇನ್ನು ಕಾಶ್ಮೀರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅನಂತನಾಗ್ ಜಿಲ್ಲೆ ಕೂಡ ಒಂದಾಗಿದ್ದು, ಮೇ ತಿಂಗಳಲ್ಲೇ ಭದ್ರತಾ ಪಡೆಗಳು 8 ಮಂದಿ ಉಗ್ರರನ್ನು ಹತ್ಯೆಗೈದಿವೆ. ಅಂತೆಯೇ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಜೀವಂತ ಸೆರೆ ಹಿಡಿಯಲಾಗಿದೆ. ಇತ್ತೀಚೆಗಷ್ಟೇ ತ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಝಾಕಿರ್ ಮುಸಾನನ್ನು ಕೊಲ್ಲಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT