ನರೇಂದ್ರ ಮೋದಿ-ನಿತಿಶ್ ಕುಮಾರ್ 
ದೇಶ

ಸಚಿವ ಸ್ಥಾನ ಹಂಚಿಕೆ ಅಸಮಾಧಾನ: ಮೋದಿ ಸಂಪುಟದಿಂದ ದೂರ ಉಳಿದ ಜೆಡಿ(ಯು)

ಪ್ರಧಾನಿ ನರೇಂದ್ರ ಮೋದಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಈ ಮಧ್ಯೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ಪಕ್ಷ ಪ್ರಧಾನಿ ಮೋದಿ ನೂತನ ಸರ್ಕಾರದ ಜೊತೆ ಇರುವುದು ಸಂದೇಹವಾಗಿದೆ.

ನವದೆಹಲಿ: ಮಹತ್ತರ ಬೆಳವಣಿಗೆಯಲ್ಲಿ ಎನ್‌ಡಿಎದ ಪ್ರಮುಖ ಮಿತ್ರಪಕ್ಷವಾದ ಜನತಾದಳ (ಸಂಯುಕ್ತ) ದ ನಾಯಕ ನಿತೀಶ್‌ ಕುಮಾರ್‌, ತಮ್ಮ ಪಕ್ಷ ನರೇಂದ್ರ ಮೋದಿ ಸರ್ಕಾರದಲ್ಲಿ ಈ ಬಾರಿ ಸಂಪುಟದ ಭಾಗವಾಗಿರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಚಿವ ಸ್ಥಾನಗಳ ಹಂಚಿಕೆಗೆ ನಾವು ಸಮ್ಮತಿಸಿಲ್ಲ, ಆದರೆ ನಾವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ತನ್ನೆಲ್ಲ ಮಿತ್ರಪಕ್ಷಗಳಿಗೂ ಸಂಪುಟದಲ್ಲಿ ಕೇವಲ ಒಂದು ಸ್ಥಾನ ನೀಡಿದೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿಯವರು ಈ ಹೇಳಿಕೆ ನೀಡಿದ್ದಾರೆ.

ನಿತಿಶ್‌ ಕುಮಾರ್‌, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಜೊತೆಗಿನ ಸಭೆಯ ವೇಳೆ 2 ಸಂಪುಟ ಸಚಿವ ಸ್ಥಾನ ಕೇಳಿದ್ದರು ಎಂದು ಮೂಲಗಳು ತಿಳಿಸಿವೆ.

40 ಸ್ಥಾನಗಳ ಬಿಹಾರದಲ್ಲಿ ನಿತೀಶ್‌ ಕುಮಾರ್‌ ಪಕ್ಷ 16 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ತಾನು ಸ್ಪರ್ಧಿಸಿದ್ದ ಎಲ್ಲ 17 ಸ್ಥಾನ ಗೆದ್ದಿತ್ತು.

2013ರಲ್ಲಿ ಮೋದಿ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ಜೆಡಿಯು ಎನ್‌ಡಿಎದಿಂದ ಹೊರನಡೆದಿತ್ತು. ಆದರೆ  2017ರ ನವೆಂಬರ್‌ನಲ್ಲಿ ಮತ್ತೆ ಮೈತ್ರಿಕೂಟಕ್ಕೆ ಮರಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ