ನರೇಂದ್ರ ಮೋದಿ-ನಿತಿಶ್ ಕುಮಾರ್ 
ದೇಶ

ಸಚಿವ ಸ್ಥಾನ ಹಂಚಿಕೆ ಅಸಮಾಧಾನ: ಮೋದಿ ಸಂಪುಟದಿಂದ ದೂರ ಉಳಿದ ಜೆಡಿ(ಯು)

ಪ್ರಧಾನಿ ನರೇಂದ್ರ ಮೋದಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಈ ಮಧ್ಯೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ಪಕ್ಷ ಪ್ರಧಾನಿ ಮೋದಿ ನೂತನ ಸರ್ಕಾರದ ಜೊತೆ ಇರುವುದು ಸಂದೇಹವಾಗಿದೆ.

ನವದೆಹಲಿ: ಮಹತ್ತರ ಬೆಳವಣಿಗೆಯಲ್ಲಿ ಎನ್‌ಡಿಎದ ಪ್ರಮುಖ ಮಿತ್ರಪಕ್ಷವಾದ ಜನತಾದಳ (ಸಂಯುಕ್ತ) ದ ನಾಯಕ ನಿತೀಶ್‌ ಕುಮಾರ್‌, ತಮ್ಮ ಪಕ್ಷ ನರೇಂದ್ರ ಮೋದಿ ಸರ್ಕಾರದಲ್ಲಿ ಈ ಬಾರಿ ಸಂಪುಟದ ಭಾಗವಾಗಿರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಚಿವ ಸ್ಥಾನಗಳ ಹಂಚಿಕೆಗೆ ನಾವು ಸಮ್ಮತಿಸಿಲ್ಲ, ಆದರೆ ನಾವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ತನ್ನೆಲ್ಲ ಮಿತ್ರಪಕ್ಷಗಳಿಗೂ ಸಂಪುಟದಲ್ಲಿ ಕೇವಲ ಒಂದು ಸ್ಥಾನ ನೀಡಿದೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿಯವರು ಈ ಹೇಳಿಕೆ ನೀಡಿದ್ದಾರೆ.

ನಿತಿಶ್‌ ಕುಮಾರ್‌, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಜೊತೆಗಿನ ಸಭೆಯ ವೇಳೆ 2 ಸಂಪುಟ ಸಚಿವ ಸ್ಥಾನ ಕೇಳಿದ್ದರು ಎಂದು ಮೂಲಗಳು ತಿಳಿಸಿವೆ.

40 ಸ್ಥಾನಗಳ ಬಿಹಾರದಲ್ಲಿ ನಿತೀಶ್‌ ಕುಮಾರ್‌ ಪಕ್ಷ 16 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ತಾನು ಸ್ಪರ್ಧಿಸಿದ್ದ ಎಲ್ಲ 17 ಸ್ಥಾನ ಗೆದ್ದಿತ್ತು.

2013ರಲ್ಲಿ ಮೋದಿ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ಜೆಡಿಯು ಎನ್‌ಡಿಎದಿಂದ ಹೊರನಡೆದಿತ್ತು. ಆದರೆ  2017ರ ನವೆಂಬರ್‌ನಲ್ಲಿ ಮತ್ತೆ ಮೈತ್ರಿಕೂಟಕ್ಕೆ ಮರಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT