ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಜಿಪಿ ಬದಲಾವಣೆ ಮಾಡಿದ ಜಗನ್ 
ದೇಶ

ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಜಿಪಿ ಬದಲಾವಣೆ ಮಾಡಿದ ಜಗನ್

ಆಂಧ್ರಪ್ರದೇಶ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ವೈಎಸ್ ಜಗನ್ ಮೋಹನ್ ಆಂಧ್ರ ಪ್ರದೇಶದ ಡಿಜಿಪಿ ಹುದ್ದೆಯಲ್ಲಿದ್ದ ಅಧಿಕಾರಿಯನ್ನು ಬದಲಾವಣೆ ಮಾಡಿದ್ದಾರೆ.

ಅಮರಾವತಿ: ಆಂಧ್ರಪ್ರದೇಶ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ವೈಎಸ್ ಜಗನ್ ಮೋಹನ್ ಆಂಧ್ರ ಪ್ರದೇಶದ ಡಿಜಿಪಿ ಹುದ್ದೆಯಲ್ಲಿದ್ದ ಅಧಿಕಾರಿಯನ್ನು ಬದಲಾವಣೆ ಮಾಡಿದ್ದಾರೆ. 
ವೈಎಸ್ ಜಗನ್ ರೆಡ್ಡಿ ಮುಖ್ಯಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ಡಿಜಿಪಿಯಾಗಿದ್ದ ಆರ್ ಪಿ ಠಾಕೂರ್ ಅವರ ಬದಲಾವಣೆಯನ್ನೂ ನಿರೀಕ್ಷೆ ಮಾಡಲಾಗಿತ್ತು. 
ಭ್ರಷ್ಟಾಚಾರ ನಿಗ್ರಹ ದಳದ ಡಿಜಿಯಾಗಿರುವ ಎಬಿ ವೆಂಕಟೇಶ್ವರ್ ರಾವ್ (1989 ರ ಬ್ಯಾಚ್) ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ. 
ಗೌತಮ್ ಸಾವಂಗ್ ಆಂಧ್ರ ಹೊಸ ಡಿಜಿಪಿ
ಗೌತಮ್ ಡಿ ಸಾವಂಗ್ ಅವರನ್ನು ರಾಜ್ಯದ ಹೊಸ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ಎಲ್ ವಿ ಸುಬ್ರಮಣ್ಯಂ ಅವರು ಹೊಸ ಡಿಜಿಪಿ ನೇಮಕಾತಿ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. 
ಪ್ರಸ್ತುತ ಡಿಜಿಪಿ ಆರ್.ಪಿ. ಠಾಕೂರ್ ಅವರನ್ನು  ಮುದ್ರಣ ಮತ್ತು ಸ್ಟೇಷನರಿ ಇಲಾಖೆಯ ಡಿಜಿ ಆಗಿ ನೇಮಿಸಿ ವರ್ಗಾಯಿಸಲಾಗಿದೆ.  ಹೊಸದಾಗಿ ನೇಮಕಗೊಂಡ ಡಿಜಿಪಿ ಸಾವಂಗ್ ಅವರು ಇಂದು ಮುಖ್ಯಮಂತ್ರಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT