ಸಾಂದರ್ಭಿಕ ಚಿತ್ರ 
ದೇಶ

ದೇಶದ ಎಲ್ಲಾ ರೈತರಿಗೂ ಪಿಎಂ ಕಿಸಾನ್ ಯೋಜನೆ ವಿಸ್ತರಣೆ, ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ

ಸತತ ಎರಡನೇ ಅವಧಿಗೆ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಂಪುಟ ಸಭೆಯಲ್ಲಿ...

ನವದೆಹಲಿ: ಸತತ ಎರಡನೇ ಅವಧಿಗೆ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಈ ಹಿಂದೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ. ಸಹಾಯಧನ ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಇದೀಗ ಎಲ್ಲಾ ರೈತರಿಗೂ ವಿಸ್ತರಣೆ ಮಾಡಲು ಮೋದಿ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇನ್ನು ಕೇಂದ್ರದ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 87,217.50 ಕೋಟಿ ರೂ. ಹೊರೆ ಬೀಳಲಿದ್ದು, ರೈತರ ಆರ್ಥಿಕ ಸ್ಥಿತಿ ಸುಧಾರಿಸುವ ತನ್ನ ವಾಗ್ದಾನಕ್ಕೆ ಬದ್ಧ ಎಂಬ ಸಂದೇಶವನ್ನು ಮೋದಿ ಸರ್ಕಾರ ರವಾನಿಸಿದೆ.
ಇದೇ ವೇಳೆ ಪಿಎಂ-ಕಿಸಾನ್‌ ಪೆನ್ಷನ್‌ ಯೋಜನೆ(ಎಸ್‌ಎಂಎಫ್‌)ಗೂ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಯೋಜನೆ ಸಂಪೂರ್ಣ ಐಚ್ಛಿಕವಾಗಿದ್ದು, ದೇಶದ ಎಲ್ಲ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಂಚಣಿ ನೀಡುವ ಯೋಜನೆ ಇದಾಗಿದೆ. 
ಇನ್ನು ವ್ಯಾಪಾರಸ್ಥರಿಗೂ ಪಿಂಚಣಿ ಯೋಜನೆ ಘೋಷಿಸಿರುವ ಮೋದಿ ಸರ್ಕಾರ, ದೇಶದ ಸುಮಾರು 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT