ದೇಶ

ಕಾಶ್ಮೀರ: ವಿಧ್ವಂಸಕ್ಕೆ ಉಗ್ರರ ಸಂಚು, ಸೇನೆಯ ಗುಂಡಿಗೆ ಉಗ್ರ ಹತ!

Srinivasamurthy VN
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಉಗ್ರರ ಮೇಲೆ ಸೇನೆ ಮುಗಿ ಬಿದ್ದಿದ್ದು, ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ.
ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡ್ರ್ಯಾಗಡ್ ಸುಗಾನ್ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಇಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನೆ ಕೂಡಲೇ ಆ ಮನೆಯನ್ನು ಸುತ್ತುವರೆದು ಉಗ್ರರಿಗೆ ಶರಣಾಗುವಂತೆ ಎಚ್ಚರಿಕೆ ನೀಡಿತು. ಆದರೆ ಸೇನೆ ಮನೆಯನ್ನು ಸುತ್ತುವರಿಯುತ್ತಲೇ ಏಕಾಏಕಿ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆ ಗೈದಿದ್ದಾರೆ. 
ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ನಡೆಸಿದ್ದು, ಸೈನಿಕರ ಗುಂಡಿಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನಾ ಪ್ರದೇಶದಲ್ಲಿ ಇನ್ನೂ ಉಗ್ರರಿರುವ ಶಂಕೆ ವ್ಯಕ್ತವಾಗಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. 
SCROLL FOR NEXT