ಜೀವಂತ ಮಗು ಊಳಲು ಯತ್ನಿಸಿದವರ ಬಂಧನ 
ದೇಶ

ಮಗುವನ್ನು ಜೀವಂತವಾಗಿ ಹೂಳಲು ಯತ್ನ: ಪೊಲೀಸರಿಂದ ಇಬ್ಬರ ಬಂಧನ

ಮಗುವನ್ನು ಜೀವಂತವಾಗಿ ಹೂಳಲು ಯತ್ನಿಸಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.  

ಹೈದರಾಬಾದ್: ಮಗುವನ್ನು ಜೀವಂತವಾಗಿ ಹೂಳಲು ಯತ್ನಿಸಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.  

ಗುರುವಾರ ಬೆಳಗ್ಗೆ ಜ್ಯುಬಿಲಿ ಬಸ್ ನಿಲ್ದಾಣದ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್ ವೊಂದನ್ನು ಹಿಡಿದು ನಿಂತಿರುವುದನ್ನು ರಿಕ್ಷಾ ಚಾಲಕರೊಬ್ಬರು ಗಮನಿಸಿದ್ದರು. ಅಲ್ಲದೇ ಅವರು ಮೈದಾನದಲ್ಲಿ ಗುಂಡಿ ತೋಡುತ್ತಿರುವುದನ್ನು ಗಮನಿಸಿದ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ

ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ ಬ್ಯಾಗ್ ನಲ್ಲಿ ಮಗು ಇರುವುದು ಪತ್ತೆಯಾಗಿತ್ತು. ಬಳಿಕ ಕರೀಂನಗರ್ ಜಿಲ್ಲೆಯ ನಿವಾಸಿಗಳಾದ ಇಬ್ಬರನ್ನು ವಿಚಾರಣೆಗೊಳಪಡಿಸಿದಾಗ, ಇದು ತನ್ನ ಮೊಮ್ಮಗಳು, ಇತ್ತೀಚೆಗಷ್ಟೇ ಆಪರೇಶನ್ ಮಾಡಿದ್ದರೂಅದು ಫಲಕಾರಿಯಾಗದೆ ಸಾವನ್ನಪ್ಪಿದೆ.

ಅಲ್ಲದೇ ಮೃತದೇಹವನ್ನು ಸಾರ್ವಜನಿಕ ಸಾರಿಗೆಯಲ್ಲಿ ತರಲು ಅನುಮತಿ ನೀಡುವುದಿಲ್ಲ. ಹೀಗಾಗಿ ಮೈದಾನದಲ್ಲಿ ಶವ ಹೂಳಲು ಬಂದಿರುವುದಾಗಿ ತಿಳಿಸಿದ್ದರು.

ಆದರೆ ಚೀಲದಿಂದ ಮಗುವನ್ನು ಹೊರತೆಗೆದು ಪೊಲೀಸರು ಪರಿಶೀಲಿಸಿದಾಗ ಮಗು ಜೀವಂತಾಗಿತ್ತು! ಬಳಿಕ ಮಗುವನ್ನು ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿ ಮುಂದಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

ಹೀನಾ ಬಂಗಾರದ ಬೇಟೆ: 40 ಚಿನ್ನದ ಪದಕಗಳೊಂದಿಗೆ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನದಲ್ಲಿ ಭಾರತ!

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

SCROLL FOR NEXT