ರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆ: ಜನತೆಯಲ್ಲಿ ಆತಂಕ 
ದೇಶ

ರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆ: ಜನತೆಯಲ್ಲಿ ಆತಂಕ

ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಅನುಮಾನಾಸ್ಪದ ಬ್ಯಾಗ್'ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಅನುಮಾನಾಸ್ಪದ ಬ್ಯಾಗ್'ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಕೆಲ ಗಂಟೆಗಳ ಕಾಲ ನಿಲ್ದಾಣದಲ್ಲಿ ಪ್ರಯಾಣಿಕರ ಚಲನವಲನಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಬೆಳವಣಿಗೆಗಳು ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ. 
 

ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಕಪ್ಪು ಬಣ್ಣದ ಬ್ಯಾಗ್ ವೊಂದು ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ರಾತ್ರಿ1 ಗಂಟೆ ಸುಮಾರಿಗೆ ಸಿಐಎಸ್ಎಫ್ ಸಿಬ್ಬಂದಿ ಇದನ್ನು ಪತ್ತೆ ಮಾಡಿ ಸಂಭಾವ್ಯ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. 

ಬ್ಯಾಗ್'ನಲ್ಲಿ ಪತ್ತೆಯಾಗಿರುವ ವಸ್ತುವನ್ನು ಪತ್ತೆಗಾಗಿ ಪ್ರತ್ಯೇಕವಾಗಿರಿಸಲಾಗಿದ್ದು, ಬ್ಯಾಗ್ ನೊಳಗೆ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. 

ಪ್ರಸ್ತುತ ಸ್ಥಳಕ್ಕಾಗಮಿಸಿರುವ ಸ್ಫೋಟಕ ತಜ್ಞರು ಹಾಗೂ ಶ್ವಾನದಳಗಳು ತಪಾಸಣೆ ನಡೆಸುತ್ತಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಕರೆಯೊಂದು ಬಂದಿದ್ದು, ಇದಾದ ಬಳಿಕ ಟರ್ಮಿನಲ್ ಗೇಟ್ ನ.2ರ ಬಳಿ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಭದ್ರತಾ ಸಿಬ್ಬಂದಿಗಳ ನೆರವಿನೊಂದಿಗೆ ಬ್ಯಾಗ್'ನ್ನು ತೆರವುಗೊಳಿಸಲಾಗಿತ್ತು. ಈ ವರೆಗೂ ಬ್ಯಾಗ್'ನ್ನು ತೆರೆಯಲಾಗಿಲ್ಲ. ವಿಮಾನ ನಿಲ್ದಾಣದ ಸುತ್ತಮುತ್ತಲು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT