ನಾಝಿರ್ ಅಹ್ಮದ್ ಲಾವಯ್ 
ದೇಶ

ಜಮ್ಮು, ಕಾಶ್ಮೀರ ಲೆ. ಗವರ್ನರ್ ಪ್ರಮಾಣವಚನಕ್ಕೆ ಹಾಜರಾಗಿದ್ದ ಪಿಡಿಪಿ ಸಂಸದ ನಾಝಿರ್ ಅಹ್ಮದ್ ಉಚ್ಚಾಟನೆ

ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್...

ಶ್ರೀನಗರ: ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಶುಕ್ರವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಪಿಡಿಪಿ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾವಯ್ ಅವರು ಪಕ್ಷದ ನಿಲುವಿಗೆ ವಿರುದ್ಧವಾಗಿ ನಿನ್ನೆ ಶ್ರೀನಗರದಲ್ಲಿ ನಡೆದ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT