ಸಂಗ್ರಹ ಚಿತ್ರ 
ದೇಶ

ವಾಟ್ಸಪ್ ಮೂಲಕ ಗೂಢಚರ್ಯೆಗೆ ಇಸ್ರೇಲ್ ನೆರವು ಪಡೆಯುತ್ತಿದೆಯೇ ಕೇಂದ್ರ ಸರ್ಕಾರ?

ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ನವದೆಹಲಿ: ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತಂತೆ ಸುದ್ದಿಸಂಸ್ಛೆಯೊಂದು ವರದಿ ಮಾಡಿದ್ದು, ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳನ್ನು ಬಂಧಿಸಲು ಸಾಕ್ಷ್ಯ ಎನ್ನಲಾದ ಪತ್ರಗಳನ್ನು ಇಸ್ರೇಲಿನ ಸೈಬರ್ ಸ್ಪೈವೇರ್ ಅನ್ನು ಮೊಬೈಲ್ ಮತ್ತು ಕಂಪ್ಯೂಟರುಗಳಲ್ಲಿ ಇರಿಸಿರುವ ಸಂಶಯ ಮೂಡುತ್ತಿದೆ. ಪತ್ರಕರ್ತರು, ದಲಿತ ಮುಖಂಡರು, ಮಾನವ ಹಕ್ಕು ಹೋರಾಟಗಾರರ ಮೊಬೈಲುಗಳ ಗೂಢಚಾರಣೆ ಮಾಡಲಾಗಿದೆ ಎನ್ನಲಾಗಿದೆ.

ವರದಿಯಲ್ಲಿರುವಂತೆ ವಾಟ್ಸಪ್ ಮೂಲಕ ಸ್ಪೈವೇರ್ ಸಂದೇಶ ಕಳುಹಿಸಿ ದೇಶ ವಿದೇಶಗಳ 1,400 ಮಂದಿಯ ಮಾಹಿತಿಗಳನ್ನು ಸರ್ಕಾರದ ಪರವಾಗಿ ಸಂಗ್ರಹಿಸಲಾಗಿದೆ ಎಂದು ಫೇಸ್ ಬುಕ್ ಅಮೆರಿಕಾದ ಕ್ಯಾಲಿಫೋರ್ನಿಯ ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಇಸ್ರೇಲ್ ದೇಶದ NSO GROUP TECHNOLOGIES LIMITED ಮತ್ತದರ ಮಾತೃ ಸಂಸ್ಥೆ Q CYBER TECHNOLOGIES LIMITED ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ಈ ಪ್ರಕರಣ ದಾಖಲಾಗುವುದರೊಂದಿಗೆ ಫೇಸ್ ಬುಕ್ ಸಂಸ್ಥೆಗೆ ಸೇರಿದ ವಾಟ್ಸಪ್ ಸೋಶಿಯಲ್ ಮಿಡಿಯಾ ಅಪ್ಲಿಕೇಶನ್ ಬಳಕೆ ಮಾಡುವ ನೂರಕ್ಕೂ ಹೆಚ್ಚು ಮಂದಿ ಪತ್ರಕರ್ತರು, ದಲಿತ ಮುಖಂಡರು, ಮಾನವ ಹಕ್ಕು ಹೋರಾಟಗಾರರ ಬಗ್ಗೆ ಗೂಢಚರ್ಯೆ ನಡೆಸಲಾಗಿತ್ತು ಎಂದು ಹೇಳಲಾಗಿದೆ. ಈ ಮಧ್ಯೆ, ಸೈಬರ್ ಗೂಢಚರ್ಯೆ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ವಾಟ್ಸಪ್ ಕಂಪೆನಿಗೆ ಪತ್ರ ಬರೆದಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಎನ್ಎಸ್ಓ ಗ್ರೂಪ್ ಸಿದ್ಧಪಡಿಸಿದ ಪೆಗಾಸಸ್ ಎಂಬ ಹೆಸರಿನ ಸ್ಪೈವೇರ್ ಉಪಯೋಗಿಸಿ ವಿಶ್ವದ ಹಲವು ದೇಶಗಳ ಸರ್ಕಾರಗಳು ತಮ್ಮ ವಿರೋಧಿಗಳು, ರಾಯಭಾರಿಗಳು, ಹಿರಿಯ ಅಧಿಕಾರಿಗಳು, ಪತ್ರಕರ್ತರ ವಿರುದ್ಧ ಗೂಡಚರ್ಯೆ ನಡೆಸಲಾಗುತ್ತಿರುವುದು ಇದೀಗ ಇನ್ನಷ್ಟು ಖಚಿತವಾಗುತ್ತಿದೆ. ಇದೇ ಸ್ಕೈವೇರ್ ಅನ್ನು ಬಳಕೆ ಮಾಡಿ ಭಾರತದ ಕೆಲವು ಮಂದಿ ಪತ್ರಕರ್ತರು, ನಾಗರಿಕ ಹಕ್ಕುಗಳ ಹೋರಾಟಗಾರರ ಮೇಲೂ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT