ಸತ್ಯ ಪಾಲ್ ಮಲಿಕ್ 
ದೇಶ

ಜಮ್ಮು ಕಾಶ್ಮೀರದ ಸಮಸ್ಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ: ಸತ್ಯಪಾಲ್ ಮಲಿಕ್

ತಾನು ಈ ಹಿಂದೆ ಬಹಳವೇ ವಿವಾದಾತ್ಮಕವೂ, ಸಮಸ್ಯೆಗಳಿಂದ ಕೂಡಿದ ಸ್ಥಳವೊಂದರ ರಾಜ್ಯಪಾಲನಾಗಿಯೂ ಸಹ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಗೋವಾದ ನೂತನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಭಾನುವಾರ ಸತ್ಯಪಾಲ್ ಮಲಿಕ್ ಗೋವಾ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪಣಜಿ: ತಾನು ಈ ಹಿಂದೆ ಬಹಳವೇ ವಿವಾದಾತ್ಮಕವೂ, ಸಮಸ್ಯೆಗಳಿಂದ ಕೂಡಿದ ಸ್ಥಳವೊಂದರ ರಾಜ್ಯಪಾಲನಾಗಿಯೂ ಸಹ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಗೋವಾದ ನೂತನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಭಾನುವಾರ ಸತ್ಯಪಾಲ್ ಮಲಿಕ್ ಗೋವಾ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಹಿಂದೆ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರಿಗೆ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಪ್ರದೀಪ್ ನಂದ್ರಾಜೋಗ್ ಗೋವಾದ ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದ್ದಾರೆ.

"ಜಮ್ಮು ಮತ್ತು ಕಾಶ್ಮೀರ ಬಹಳ ಸಮಸ್ಯಾತ್ಮಕ ಸ್ಥಳವಾಗಿದೆ ಎನ್ನಲಾಗುತ್ತದೆ. ಆದರೆ ನಾನು ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಮತ್ತು ಎಲ್ಲಾ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಿದ್ದೇನೆ" ಎಂದು ಮಲಿಕ್ ಹೇಳಿದರು.

"ಈಗ ನಾನು ಶಾಂತಿಯುತ ಪ್ರದೇಶಕ್ಕೆ ಬಂದಿದ್ದೇನೆ.ರಾಜ್ಯ ಪ್ರಗತಿಪಥದಲ್ಲಿದೆ. ಇಲ್ಲಿ ನಾಯಕತ್ವದ ವಿವಾದಗಳಿಲ್ಲ.ಜನರು ಸಹ ಬಹಳ ಒಳ್ಳೆಯವರಾದ ಕಾರಣ ನನಗೆ ಇಲ್ಲಿ ಶಾಂತಿಯುತ ಮತ್ತು ಒಳ್ಳೆಯ ಸಮಯ ಸಿಗುತ್ತದೆ" 

ಅಕ್ಟೋಬರ್ 25 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶಿಸಿದ್ದರು.ಗೋವಾದ ಈ ಹಿಂದಿನ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರ ಅಧಿಕಾರಾವಧಿ ಈ ವರ್ಷ ಪೂರ್ಣವಾಗಿದೆ.ಮಲಿಕ್ ಈ ಹಿಂದೆ ರಾಜ್ಯಪಾಲರಾಗಿದ್ದ ಜಮ್ಮು ಕಾಶ್ಮೀರವನ್ನು ಕೇಂದ್ರ ಸರ್ಕಾರ ವಿಭಜಿಸಿ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ್ದು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಗಳಿಗೆ ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ಗಳನ್ನು ನೇಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT