ರಣದೀಪ್ ಸಿಂಗ್ ಸುರ್ಜೆವಾಲ 
ದೇಶ

ಕಾಂಗ್ರೆಸ್ ಒತ್ತಡಕ್ಕೆ ಮಣಿದು ಆರ್‌ಸಿಇಪಿಯಿಂದ ಹಿಂದೆ ಸರಿದ ಪ್ರಧಾನಿ ಮೋದಿ; ಸುರ್ಜೇವಾಲ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಐಸಿಸಿ ಸಂಪರ್ಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ‘ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ  ತೀವ್ರ ಒತ್ತಡದಿಂದ ಬಿಜೆಪಿ ಸರ್ಕಾರ ರೈತರು, ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರಿಗೆ ಅನಾನುಕೂಲವಾಗುವಂತಹ ಒಪ್ಪಂದದಿಂದ ಹಿಂದೆ ಸರಿಯುವಂತಾಯಿತು’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಒಪ್ಪಂದದಿಂದ ಭಾರತೀಯರ ಜೀವನ ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಹಾನಿಯಾಗುತ್ತದೆ. ಆದ್ದರಿಂದ ಮೋದಿ ಅವರು, ಮಹಾತ್ಮಾ ಗಾಂಧಿ ಅವರ ದುರ್ಬಲ ವರ್ಗದವರಿಗೆ ನೆರವಾಗುವ ಹೇಳಿಕೆಗಳನ್ನು ಸ್ಮರಿಸಿ, ಒಪ್ಪಂದದಿಂದ ಹಿಂದೆ ಸರಿದಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT