ನಕಲಿ ಶೂ ವಿತರಣೆ ಬಗ್ಗೆ ತನಿಖೆ, ಶಾಲೆಗಳ ದುರಸ್ತಿ ಎಸ್​ಡಿಎಂಸಿಗಳ ಹೆಗಲಿಗೆ:ಶಿಕ್ಷಣ ಸಚಿವ ಸುರೇಶ್​​ ಕುಮಾರ್ 
ದೇಶ

ನಕಲಿ ಶೂ ವಿತರಣೆ ಬಗ್ಗೆ ತನಿಖೆ, ಶಾಲೆಗಳ ದುರಸ್ತಿ ಎಸ್​ಡಿಎಂಸಿಗಳ ಹೆಗಲಿಗೆ:ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್​​ ಕುಮಾರ್

ಶಾಲಾ ಮಕ್ಕಳಿಗೆ ಶೂ ನೀಡುವ ಯೋಜನೆಯಲ್ಲಿ ಗೋಲ್​​ಮಾಲ್ ಆಗಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವ ಸುರೇಶ್​ ಕುಮಾರ್ ತಿಳಿಸಿದರು.

ಚಾಮರಾಜನಗರ: ಶಾಲಾ ಮಕ್ಕಳಿಗೆ ಶೂ ನೀಡುವ ಯೋಜನೆಯಲ್ಲಿ ಗೋಲ್​​ಮಾಲ್ ಆಗಿರುವ ಕುರಿತು ತನಿಖೆ ನಡೆಸಿ ಮೂಲ ಪುರುಷನನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ನಕಲಿ ಶೂ ವಿತರಣೆ ತನಿಖೆ, ಶಾಲೆಗಳ ದುರಸ್ತಿ ಎಸ್​​ಡಿಎಂಸಿ ಹೆಗಲಿಗೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ಜಿಲ್ಲೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮಕ್ಕಳಿಗೆ ನೀಡುವ ಶೂಗಳು 1 ತಿಂಗಳು ಬಾಳಿಕೆ ಬರುತ್ತವೆ ಎಂದು ಡೀಲರ್​ಗಳೇ ಹೇಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುವುದು. ಶೂ ವಿತರಣೆಯನ್ನು ಸರ್ಕಾರಿ ಸ್ವಾಮ್ಯದ ಲಿಡ್​ಕರ್ ಸಂಸ್ಥೆಗೆ ವಹಿಸುವ ಚಿಂತನೆಯಿದೆ ಎಂದು ಹೇಳಿದರು. ಜೊತೆಗೆ, ಶಿಥಿಲಗೊಂಡ ಶಾಲೆಗಳ ದುರಸ್ತಿ ಕಾರ್ಯದ ಜವಾಬ್ದಾರಿಯನ್ನು ಎಸ್​ಡಿಎಂಸಿಗೆ ನೀಡುತ್ತಿದ್ದು, ಅವರ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸಬಾರದು ಎಂದು ಮನವಿ ಮಾಡಿದರು.ಪಿಯುಸಿ ಫಲಿತಾಂಶಕ್ಕೂ ಮುನ್ನ ನೀಟ್ ಫಲಿತಾಂಶ ಬಂದಾಗ ವಿದ್ಯಾರ್ಥಿಗಳಿಗೆ ಒತ್ತಡ ಕಡಿಮೆಯಾಗಲಿದೆ ಎಂಬ ಸಲಹೆ ಕೇಳಿ ಬಂದಿದ್ದು, ಗುರುವಾರ ಪಿಯು ನಿರ್ದೇಶಕರು ಮತ್ತು ಹಿಂದಿನ ನಿರ್ದೇಶಕರ ಸಭೆ ಕರೆಯಲಾಗಿದೆ.

ಅಂದು ಇದು ನಿರ್ಧಾರವಾಗಲಿದೆ ಎಂದು ತಿಳಿಸಿದರು.ಟಿಪ್ಪು ವಿಚಾರವನ್ನು ಪಠ್ಯದಿಂದ ತೆಗೆದು ಹಾಕಲು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಠ್ಯದಿಂದ ತೆಗೆದುಹಾಕಬೇಕೆಂದು ಪತ್ರ ಬರೆದಿರುವ ಅಪ್ಪಚ್ಚು ರಂಜನ್ ಅವರಿಂದ ಯಾವ ಕಾರಣಗಳಿಗೆ ಟಿಪ್ಪು ಪಠ್ಯ ಬೇಡ ಎಂದು ವಿವರ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು.

ವರದಿ: ಗೂಳಿಪುರ ನಂದೀಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT