ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯೆಗೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ಸಿಬ್ಬಂದಿ ರವಾನೆ 

ರಾಮಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ತುಕಡಿಗಳನ್ನು ಗಳನ್ನು ಕಳುಹಿಸುತ್ತಿದೆ. 

ಅಯೋಧ್ಯೆ: ರಾಮಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ತುಕಡಿಗಳನ್ನು ಗಳನ್ನು ಕಳುಹಿಸುತ್ತಿದೆ. 

ನವೆಂಬರ್ 18ರವರೆಗೂ ಉತ್ತರ ಪ್ರದೇಶದಲ್ಲಿರುವಂತೆ 15 ಅರಸೇನಾ ಪಡೆಗಳ ತುಕಡಿಯನ್ನು ಉತ್ತರ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು ನಿನ್ನೆ ನಡೆದ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಕೈಗೊಳ್ಳಲಾಯಿತು.

ಮೂರು ಬಿಎಸ್ ಎಫ್, ಆರ್ ಎಎಫ್, ಸಿಐಎಸ್ ಎಫ್, ಐಟಿಬಿಪಿ ಮತ್ತು ಎಸ್ ಎಸ್ ಬಿ ತುಕಡಿಗಳು ಸೇರಿದಂತೆ 15 ಅರಸೇನಾ ಪಡೆ ತುಕಡಿಗಳನ್ನು ನವೆಂಬರ್ 11 ರಂದು ನವೆಂಬರ್ 18ರವರೆಗೂ ಉತ್ತರ ಪ್ರದೇಶದಲ್ಲಿ ನಿಯೋಜಿಸಲಾಗುತ್ತಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ, 

16 ಆರ್ ಎಎಫ್ , ಸಿಐಎಸ್ ಎಫ್ ಸೇರಿದಂತೆ ಒಟ್ಟಾರೇ 40 ತುಕಡಿಗಳನ್ನು ನವೆಂಬರ್ 18ರವರೆಗೂ ಉತ್ತರ ಪ್ರದೇಶದಲ್ಲಿ ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ ಎಂಬ ಅಧಿಕೃತ ಮಾಹಿತಿ ತಿಳಿದುಬಂದಿದೆ. 

ಉತ್ತರ ಪ್ರದೇಶದ 12 ಸೂಕ್ಷ್ಮ ಜಿಲ್ಲೆಗಳು ಹಾಗೂ ನಗರಗಳಲ್ಲಿ ಈ ಅರಸೇನಾ ಪಡೆಯನ್ನು ನಿಯೋಜಿಸಲಾಗುತ್ತಿದೆ. ವಾರಣಾಸಿ, ಅಯೋಧ್ಯೆ ಹೊರತಾಗಿಯೂ ಕಾನ್ಪುರ, ಅಲಿಘಡ, ಲಖನೌ, ಅಜಂಗಡ ಮತ್ತಿತರ ಕಡೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT