ಆಂಧ್ರ: ಕಲಾಮ್ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ವೈಎಸ್ ಆರ್ ಹೆಸರು: ವಿರೋಧಕ್ಕೆ ಮಣಿದಸಿಎಂ ಜಗನ್ ರೆಡ್ಡಿ 
ದೇಶ

ಆಂಧ್ರ: ಕಲಾಮ್ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ವೈಎಸ್ ಆರ್ ಹೆಸರು: ವಿರೋಧಕ್ಕೆ ಮಣಿದು ನಿರ್ಧಾರ ಬದಲಿಸಿದ ಸಿಎಂ ಜಗನ್ ರೆಡ್ಡಿ 

ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ನೀಡಲಾಗುವ ಅಬ್ದುಲ್ ಕಲಾಮ್ ಪ್ರತಿಭಾ ವಿದ್ಯಾ ಪುರಸ್ಕಾರ ಯೋಜನೆಯ ಹೆಸರು ಬದಲಿಸುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. 

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ನೀಡಲಾಗುವ ಅಬ್ದುಲ್ ಕಲಾಮ್ ಪ್ರತಿಭಾ ವಿದ್ಯಾ ಪುರಸ್ಕಾರ ಯೋಜನೆಯ ಹೆಸರು ಬದಲಿಸುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. 

ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಯೋಜನೆಗೆ ಅಬ್ದುಲ್ ಕಲಾಮ್ ಅವರ ಹೆಸರಿನ ಬದಲು ಆಂಧ್ರ ಪ್ರದೇಶದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಹೆಸರಿಡಲು ಸಿಎಂ ಜಗನ್ ರೆಡ್ಡಿ ಆದೇಶ ನೀಡಿದ್ದರು. 

ಆದರೆ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಆದೇಶದ ವಿರುದ್ಧ ಸಿಡಿದೆದ್ದ ಪರಿಣಾಮ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಆದೇಶ ಹಿಂಪಡೆದಿದೆ. 

ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ತಮ್ಮ ಸ್ಪೂರ್ತಿದಾಯಕ ಜೀವನದ ಮೂಲಕ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ನೀಡಲಾಗುತ್ತಿದ್ದ ಪ್ರಶಸ್ತಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ತಂದೆ ಹೆಸರು ಇಟ್ಟಿದ್ದಾರೆ. ಇದು ಸಿಎಂಗೆ ಶೋಭೆ ತರುವುದಿಲ್ಲ ಎಂದು ಟ್ವೀಟ್ ಮಾಡಿ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!