ಆಂಧ್ರ: ಕಲಾಮ್ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ವೈಎಸ್ ಆರ್ ಹೆಸರು: ವಿರೋಧಕ್ಕೆ ಮಣಿದಸಿಎಂ ಜಗನ್ ರೆಡ್ಡಿ 
ದೇಶ

ಆಂಧ್ರ: ಕಲಾಮ್ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ವೈಎಸ್ ಆರ್ ಹೆಸರು: ವಿರೋಧಕ್ಕೆ ಮಣಿದು ನಿರ್ಧಾರ ಬದಲಿಸಿದ ಸಿಎಂ ಜಗನ್ ರೆಡ್ಡಿ 

ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ನೀಡಲಾಗುವ ಅಬ್ದುಲ್ ಕಲಾಮ್ ಪ್ರತಿಭಾ ವಿದ್ಯಾ ಪುರಸ್ಕಾರ ಯೋಜನೆಯ ಹೆಸರು ಬದಲಿಸುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. 

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ನೀಡಲಾಗುವ ಅಬ್ದುಲ್ ಕಲಾಮ್ ಪ್ರತಿಭಾ ವಿದ್ಯಾ ಪುರಸ್ಕಾರ ಯೋಜನೆಯ ಹೆಸರು ಬದಲಿಸುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. 

ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಯೋಜನೆಗೆ ಅಬ್ದುಲ್ ಕಲಾಮ್ ಅವರ ಹೆಸರಿನ ಬದಲು ಆಂಧ್ರ ಪ್ರದೇಶದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಹೆಸರಿಡಲು ಸಿಎಂ ಜಗನ್ ರೆಡ್ಡಿ ಆದೇಶ ನೀಡಿದ್ದರು. 

ಆದರೆ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಆದೇಶದ ವಿರುದ್ಧ ಸಿಡಿದೆದ್ದ ಪರಿಣಾಮ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಆದೇಶ ಹಿಂಪಡೆದಿದೆ. 

ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ತಮ್ಮ ಸ್ಪೂರ್ತಿದಾಯಕ ಜೀವನದ ಮೂಲಕ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ನೀಡಲಾಗುತ್ತಿದ್ದ ಪ್ರಶಸ್ತಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ತಂದೆ ಹೆಸರು ಇಟ್ಟಿದ್ದಾರೆ. ಇದು ಸಿಎಂಗೆ ಶೋಭೆ ತರುವುದಿಲ್ಲ ಎಂದು ಟ್ವೀಟ್ ಮಾಡಿ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT