ಸಮ-ಬೆಸ ನಿಯಮ ಪಾಲಿಸಿ ಮಾಲಿನ್ಯ ತಗ್ಗಿಸಿ ಎಂದು ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಿದ ಕಾರ್ಯಕರ್ತರು 
ದೇಶ

ದೆಹಲಿ: ತಗ್ಗಿದ ವಾಯುಮಾಲಿನ್ಯ ಗುಣಮಟ್ಟ, ಜನತೆಯಲ್ಲಿ ಕಡಿಮೆಯಾಗದ ಆತಂಕ 

ರಾಷ್ಟ್ರ ರಾಜಧಾನಿ ದೆಹಲಿ ಜನತೆ ಕೊಂಚ ನೆಮ್ಮದಿಯ ಉಸಿರು ಬಿಡುವಂತಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಾದ ಗುರುಗ್ರಾಮ್, ನೊಯ್ಡಾ, ಫರೀದಾಬಾದ್ ಮತ್ತು ಗಜಿಯಾಬಾದ್ ಗಳಲ್ಲಿ ವಾಯುಮಾಲಿನ್ಯ ಗುಣಮಟ್ಟದ ಸೂಚ್ಯಂಕ(ಎಕ್ಯುಐ) ಸ್ವಲ್ಪ ಸುಧಾರಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಜನತೆ ಕೊಂಚ ನೆಮ್ಮದಿಯ ಉಸಿರು ಬಿಡುವಂತಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಾದ ಗುರುಗ್ರಾಮ್, ನೊಯ್ಡಾ, ಫರೀದಾಬಾದ್ ಮತ್ತು ಗಜಿಯಾಬಾದ್ ಗಳಲ್ಲಿ ವಾಯುಮಾಲಿನ್ಯ ಗುಣಮಟ್ಟದ ಸೂಚ್ಯಂಕ(ಎಕ್ಯುಐ) ಸ್ವಲ್ಪ ಸುಧಾರಿಸಿದೆ ಎಂದು ಕೇಂದ್ರ ವಾಯುಗುಣಮಟ್ಟ, ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ((SAFAR) ಕೇಂದ್ರ ತಿಳಿಸಿದೆ.


ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯ ಒಟ್ಟಾರೆ ವಾಯುಮಾಲಿನ್ಯ ಗುಣಮಟ್ಟ ಸೂಚ್ಯಂಕ 381 ಆಗಿದ್ದು ಅದು ಅತಿ ಕಳಪೆ ವಿಭಾಗದಲ್ಲಿ ಸೇರಿದೆ. ಸೂಚ್ಯಂಕ 51ರಿಂದ 100ರ ಮಧ್ಯೆ ಇದ್ದರೆ ಸಮಾಧಾನಕರ ಎಂದು ಪರಿಗಣಿಸಲಾಗುತ್ತದೆ. 101ರಿಂದ 200ರವರೆಗೆ ಇದ್ದರೆ ಸಾಧಾರಣ, 201ರಿಂದ 300ರವರೆಗೆ ಇದ್ದರೆ ಕಳಪೆ ಗುಣಮಟ್ಟ ಎಂದು ಪರಿಗಣಿಸಲಾಗುತ್ತದೆ. 300ರಿಂದ 400ರೊಳಗೆ ವಾಯುಮಾಲಿನ್ಯ ಗುಣಮಟ್ಟ ಸೂಚ್ಯಂಕ ಹೊಂದಿದ್ದರೆ ಅದು ತೀರಾ ಕಳಪೆ ಎಂದು ಮತ್ತು 401ರಿಂದ 500ರ ಮಧ್ಯೆ ಇದ್ದರೆ ಅಪಾಯಕಾರಿ ಎಂದು ಹೇಳಲಾಗುತ್ತದೆ.


ಧೀರ್ಪುರ್ ನಲ್ಲಿ ವಾಯುಮಾಲಿನ್ಯ ಗುಣಮಟ್ಟ ಸೂಚ್ಯಂಕ ಇಂದು ಬೆಳಗ್ಗೆ 271 ಆಗಿತ್ತು, ಮಥುರಾ ರಸ್ತೆಯಲ್ಲಿ ಕಳಪೆ ಗುಣಮಟ್ಟಕ್ಕೆ ಅಂದರೆ 236ಕ್ಕೆ ಇಳಿದಿದೆ. ಚಾಂದ್ನಿ ಚೌಕ್, ವಿಮಾನ ನಿಲ್ದಾಣ, ಟರ್ಮಿನಲ್ 3, ದೆಹಲಿ ವಿಶ್ವವಿದ್ಯಾಲಯದಲ್ಲಿ ಎಕ್ಯುಐ ಕ್ರಮವಾಗಿ ಇಂದು ಬೆಳಗ್ಗೆ 375, 234 ಮತ್ತು 256 ಆಗಿದ್ದವು.


ಮಧ್ಯ ವಯಸ್ಸಿನವರು ಮತ್ತು ಇಳಿ ವಯಸ್ಸಿನವರು ಉಸಿರಾಟ, ಸುಸ್ತು, ತುರಿಕೆ, ತಲೆನೋವಿನ ಸಮಸ್ಯೆ ಎಂದು ಹೇಳುತ್ತಿದ್ದು ದೆಹಲಿ ಸರ್ಕಾರ ಈ ಸಮಸ್ಯೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT