ಸಂಗ್ರಹ ಚಿತ್ರ 
ದೇಶ

ರಾಜಕೀಯ ಕೈದಿಗಳ ಬಿಡುಗಡೆ ಮಾಡಿ, ಕಾಶ್ಮೀರ ಸಹಜಸ್ಥಿತಿಗೆ ತನ್ನಿ: ನ್ಯಾಷನಲ್ ಕಾನ್ಫರೆನ್ಸ್

ವಿಧಿ 370ರ ರದ್ಧತಿ ಬಳಿಕ ಉಂಟಾದ ಪ್ರತಿಭಟನೆಗಳಲ್ಲಿ ಬಂಧಿಸಲ್ಪಟ್ಟಿರುವ ರಾಜಕೀಯ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಿ ಕಾಶ್ಮೀರವನ್ನು ಸಹಜಸ್ಛಿತಿಗೆ ತರುವಂತೆ ನ್ಯಾಷನಲ್ ಕಾನ್ಫರೆನ್ಸ್ ಹೇಳಿದೆ.

ಶ್ರೀನಗರ: ವಿಧಿ 370ರ ರದ್ಧತಿ ಬಳಿಕ ಉಂಟಾದ ಪ್ರತಿಭಟನೆಗಳಲ್ಲಿ ಬಂಧಿಸಲ್ಪಟ್ಟಿರುವ ರಾಜಕೀಯ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಿ ಕಾಶ್ಮೀರವನ್ನು ಸಹಜಸ್ಛಿತಿಗೆ ತರುವಂತೆ ನ್ಯಾಷನಲ್ ಕಾನ್ಫರೆನ್ಸ್ ಹೇಳಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, ವಿಧಿ 370ರ ರದ್ಧತಿ ಬಳಿಕ ಬಂಧಿಸಲಾಗಿರುವ ಎಲ್ಲ ರಾಜಕೀಯ ನಾಯಕರುಗಳನ್ನು ಮತ್ತು ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಆ ಮೂಲಕ ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಬೇಕು ಎಂದು ಹೇಳಿದೆ.

ಅಲ್ಲದೆ ಈ ಹಿಂದಿನಂತೆ ರಾಜಕೀಯ ಚಟುವಟಿಕೆಗಳಿಗೆ ಆಸ್ಪದ ನೀಡಬೇಕು ಎಂದೂ ಎನ್ ಸಿ ಆಗ್ರಹಿಸಿದೆ. ಇಂದಿಗೆ ಅಂದರೆ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ವಿಧಿ 370ನ್ನು ರದ್ದು ಮಾಡಿ 3 ತಿಂಗಳಾಗಿದ್ದು, ಈ ವರೆಗೂ ಕಾಶ್ಮೀರ ಸಹಜ ಸ್ಥಿತಿಗೆ ಬಂದಿಲ್ಲ. ರಾಜ್ಯದಲ್ಲಿ ಸಂವಹನ ಮತ್ತು ನಾಗರಿಕ ಸ್ವಾತಂತ್ರ್ಯಗಳನ್ನು ಕಿತ್ತುಕೊಳ್ಳಲಾಗಿದೆ. ಇಂದಿಗೂ ಅಮಾಯಕ ನಾಗರೀಕರನ್ನು ವಶಕ್ಕೆ ಪಡೆದು ತನಿಖೆಗೊಳಪಡಿಸಲಾಗುತ್ತಿದೆ. ರಾಜ್ಯದ ಹೊರಗಿನ ಜೈಲುಗಳಲ್ಲಿ ಇಂದಿಗೂ ಹಲವು ಕಾಶ್ಮೀರಿ ಯುವಕರನ್ನು ಬಂಧಿಸಿಡಲಾಗಿದೆ. ಇದು ಸಹಿಸಲಸಾಧ್ಯ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಎನ್ ಸಿ ಆಗ್ರಹಿಸಿದೆ.

ಅಲ್ಲದೆ ಕಣಿವೆಯಲ್ಲಿ ಮತ್ತೆ ರಾಜಕೀಯ ಚುಟುವಟಿಕೆಗಳು ಪುನಾರಂಭಕ್ಕೆ ಅವಕಾಶ ಮಾಡಿಕೊಡಬೇಕು. ಇದಕ್ಕಾಗಿ ಗೃಹ ಬಂಧನದಲ್ಲಿರಿಸಲಾಗಿರುವ ಎಲ್ಲ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ