ಅಹ್ಮದ್ ಪಟೇಲ್ 
ದೇಶ

ಮಹಾ ರಾಜಕೀಯ ಬಿಕ್ಕಟ್ಟು: ಕುತೂಹಲ ಮೂಡಿಸಿದ ನಿತಿನ್ ಗಡ್ಕರಿ – ಅಹ್ಮದ್ ಪಟೇಲ್ ಭೇಟಿ

ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸರ್ಕಾರ ರಚನೆ ಸಂಬಂಧ ಬಿಜೆಪಿ–ಶಿವಸೇನಾ ಮೈತ್ರಿ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಸಂದರ್ಭದಲ್ಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ...

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸರ್ಕಾರ ರಚನೆ ಸಂಬಂಧ ಬಿಜೆಪಿ–ಶಿವಸೇನಾ ಮೈತ್ರಿ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಸಂದರ್ಭದಲ್ಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಅಹ್ಮದ್ ಪಟೇಲ್ ಅವರು ಇಂದು ಬೆಳಿಗ್ಗೆ ದೆಹಲಿಯ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಗಡ್ಕರಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಬಳಿಕ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಶಿವಸೇನಾಗೆ ಬಾಹ್ಯ ಬೆಂಬಲ ನೀಡಲು ಮಹಾರಾಷ್ಟ್ರದ ಕೆಲವು ಕಾಂಗ್ರೆಸ್‌ ನಾಯಕರು ಒಲವು ಹೊಂದಿದ್ದರು. ಆ ಕುರಿತು ಚರ್ಚೆಯೂ ನಡೆದಿತ್ತು. ಆದರೆ ಭಿನ್ನ ಸಿದ್ಧಾಂತ ಹೊಂದಿರುವ ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗಡ್ಕರಿ ಅವರನ್ನು ಅಹ್ಮದ್ ಪಟೇಲ್ ಭೇಟಿಯಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ಮಧ್ಯೆ, ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸ್ಪಷ್ಟಪಡಿಸಿದ್ದು, ತಾವು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT