ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 
ದೇಶ

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 

ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ.

ಮುಂಬೈ: ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ. ಈ ನಡುವೆ ಎನ್ ಸಿಪಿ ಜೊತೆಗೂಡಿ ಶಿವಸೇನೆ ಸರ್ಕಾರ ರಚನೆ ಮಾಡಲಿದೆಯೇ ಎಂಬ ಪ್ರಶ್ನೆ ಮೂಡಿಸಿದೆ ಶರದ್ ಪವಾರ್-ಶಿವಸೇನೆ ನಾಯಕ ಸಂಜಯ್ ರಾವುತ್ ಭೇಟಿ! 

ನ.06 ರಂದು ಶಿವಸೇನೆಯ ನಾಯಕ ಸಂಜಯ್ ರಾವುತ್ ಹಾಗೂ ಎನ್ ಸಿಪಿ ನಾಯಕ ಶರದ್ ಪವಾರ್ ಭೇಟಿ ಮಾಡಿದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. 

ಎನ್ ಸಿಪಿ ನಾಯಕರನ್ನು ಭೇಟಿ ಮಾಡಿರುವುದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವುತ್, ಇದೊಂದು ಸೌಜನ್ಯದ ಭೇಟಿಯಷ್ಟೇ ಎಂದು ಹೇಳಿದ್ದಾರೆ.

ಶಿವಸೇನೆ ಸರ್ಕಾರ ರಚನೆ ಮಾಡುವುದರ ಬಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾದ ದಿನದಿಂದಲೂ ಸಂಜಯ್ ರಾವುತ್ ಉತ್ಸಾಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆಯಾಗಿದ್ದೇ ಆದಲ್ಲಿ ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು ಎಂದು ಶಿವಸೇನೆ ಪಟ್ಟು ಹಿಡಿದಿರುವುದರಿಂದ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT