ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 
ದೇಶ

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 

ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ.

ಮುಂಬೈ: ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ. ಈ ನಡುವೆ ಎನ್ ಸಿಪಿ ಜೊತೆಗೂಡಿ ಶಿವಸೇನೆ ಸರ್ಕಾರ ರಚನೆ ಮಾಡಲಿದೆಯೇ ಎಂಬ ಪ್ರಶ್ನೆ ಮೂಡಿಸಿದೆ ಶರದ್ ಪವಾರ್-ಶಿವಸೇನೆ ನಾಯಕ ಸಂಜಯ್ ರಾವುತ್ ಭೇಟಿ! 

ನ.06 ರಂದು ಶಿವಸೇನೆಯ ನಾಯಕ ಸಂಜಯ್ ರಾವುತ್ ಹಾಗೂ ಎನ್ ಸಿಪಿ ನಾಯಕ ಶರದ್ ಪವಾರ್ ಭೇಟಿ ಮಾಡಿದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. 

ಎನ್ ಸಿಪಿ ನಾಯಕರನ್ನು ಭೇಟಿ ಮಾಡಿರುವುದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವುತ್, ಇದೊಂದು ಸೌಜನ್ಯದ ಭೇಟಿಯಷ್ಟೇ ಎಂದು ಹೇಳಿದ್ದಾರೆ.

ಶಿವಸೇನೆ ಸರ್ಕಾರ ರಚನೆ ಮಾಡುವುದರ ಬಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾದ ದಿನದಿಂದಲೂ ಸಂಜಯ್ ರಾವುತ್ ಉತ್ಸಾಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆಯಾಗಿದ್ದೇ ಆದಲ್ಲಿ ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು ಎಂದು ಶಿವಸೇನೆ ಪಟ್ಟು ಹಿಡಿದಿರುವುದರಿಂದ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಬೇಸಿಗೆಯಲ್ಲಿ ಬಾಡದಿರಲಿ ಚರ್ಮ (ಕುಶಲವೇ ಕ್ಷೇಮವೇ)

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

SCROLL FOR NEXT