ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 
ದೇಶ

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 

ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ.

ಮುಂಬೈ: ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ. ಈ ನಡುವೆ ಎನ್ ಸಿಪಿ ಜೊತೆಗೂಡಿ ಶಿವಸೇನೆ ಸರ್ಕಾರ ರಚನೆ ಮಾಡಲಿದೆಯೇ ಎಂಬ ಪ್ರಶ್ನೆ ಮೂಡಿಸಿದೆ ಶರದ್ ಪವಾರ್-ಶಿವಸೇನೆ ನಾಯಕ ಸಂಜಯ್ ರಾವುತ್ ಭೇಟಿ! 

ನ.06 ರಂದು ಶಿವಸೇನೆಯ ನಾಯಕ ಸಂಜಯ್ ರಾವುತ್ ಹಾಗೂ ಎನ್ ಸಿಪಿ ನಾಯಕ ಶರದ್ ಪವಾರ್ ಭೇಟಿ ಮಾಡಿದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. 

ಎನ್ ಸಿಪಿ ನಾಯಕರನ್ನು ಭೇಟಿ ಮಾಡಿರುವುದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವುತ್, ಇದೊಂದು ಸೌಜನ್ಯದ ಭೇಟಿಯಷ್ಟೇ ಎಂದು ಹೇಳಿದ್ದಾರೆ.

ಶಿವಸೇನೆ ಸರ್ಕಾರ ರಚನೆ ಮಾಡುವುದರ ಬಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾದ ದಿನದಿಂದಲೂ ಸಂಜಯ್ ರಾವುತ್ ಉತ್ಸಾಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆಯಾಗಿದ್ದೇ ಆದಲ್ಲಿ ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು ಎಂದು ಶಿವಸೇನೆ ಪಟ್ಟು ಹಿಡಿದಿರುವುದರಿಂದ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್