ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮ 

ಛತ್ತೀಸ್ ಗಢ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್)ನ ಯೋಧ ಹುತಾತ್ಮರಾಗಿದ್ದಾರೆ.

ರಾಯ್ ಪುರ(ಛತ್ತೀಸ್ ಗಢ): ಛತ್ತೀಸ್ ಗಢ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್)ನ ಯೋಧ ಹುತಾತ್ಮರಾಗಿದ್ದಾರೆ.


ಇಂದು ಬೆಳಗ್ಗೆ ನಕ್ಸಲೀಯರು ಇದ್ದಕ್ಕಿದ್ದಂತೆ ಗುಂಡಿನ ಚಕಮಕಿ ಆರಂಭಿಸಿದರು. ಇದಕ್ಕೆ ಪ್ರತ್ಯುತ್ತರ ನೀಡುವ ಸಂದರ್ಭದಲ್ಲಿ ಜವಾನ ಹುತಾತ್ಮರಾಗಿದ್ದಾರೆ. ಎನ್ ಕೌಂಟರ್ ನಲ್ಲಿ ಕೆಲವು ಮಾವೋವಾದಿಗಳು ಸಹ ಹತ್ಯೆಯಾಗಿರಬಹುದು ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ.


ನಕ್ಸಲರು ಅಡಗಿರುವ ಶಂಕೆಯಿಂದ ಯೋಧರು ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇಂದು ನಸುಕಿನ ಜಾವ 4 ಗಂಟೆ ಹೊತ್ತಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ ಕೋಬ್ರಾ ಘಟಕದ ಸಿಬ್ಬಂದಿ ಪಮೇಡ್ ಪ್ರದೇಶದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾಗ ನಕ್ಸಲರು ಏಕಾಏಕಿ ದಾಳಿ ಮಾಡಲು ಆರಂಭಿಸಿದರು ಎಂದು ಉಪ ಪೊಲೀಸ್ ಮಹಾ ನಿರ್ದೇಶಕ ಸುಂದರ್ ರಾಜ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.


ಭದ್ರತಾ ಸಿಬ್ಬಂದಿ ಸುತ್ತುವರಿದ ತಕ್ಷಣ ನಕ್ಸಲೀಯರು ಸ್ಥಳ ಬಿಟ್ಟು ಪರಾರಿಯಾಗಿದ್ದಾರೆ. ಚಕಮಕಿಯಲ್ಲಿ ಕಾನ್ಸ್ಟೇಬಲ್ ಕಮ್ಟಾ ಪ್ರಸಾದ್ ತೀವ್ರ ಗಾಯಗೊಂಡಿದ್ದರು. ಅವರನ್ನು ನೆರೆಯ ತೆಲಂಗಾಣದ ಚೆರ್ಲಾ ಆಸ್ಪತ್ರೆಗೆ ವರ್ಗಾಯಿಸುತ್ತಿದ್ದ ವೇಳೆ ಹುತಾತ್ಮರಾದರು. 


ದಂತೇವಾಡ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲೀಯರು ಹತ್ಯೆಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT