ಹಿಮಪಾತ 
ದೇಶ

ಕತ್ತಲೆಯಲ್ಲಿ ಕಾಶ್ಮೀರ: ಹಿಮಪಾತದಿಂದ ನಾಲ್ವರು ಯೋಧರು ಸೇರಿ 10 ಮಂದಿ ಸಾವು

ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಶ್ರೀನಗರ: ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಹಿಮಪಾತದ ನಡುವೆ ಬುಧವಾರ ರಾತ್ರಿಯಿಂದ ವಿದ್ಯುತ್ ಸರಬರಾಜು ಸಹ ಸ್ಥಗಿತಗೊಂಡಿರುವುದರಿಂದ ಕಣಿವೆ ರಾಜ್ಯ ಕತ್ತಲೆಯಲ್ಲಿ ಮುಳುಗಿದೆ.

ಕಣಿವೆಯಲ್ಲಿ ಬುಧವಾರ ರಾತ್ರಿಯಿಂದ ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ವಿದ್ಯುತ್ ಕಡಿತಗೊಂಡಿದೆ. ಈ ಸಂಸ್ಥೆಗಳಿಗೆ ವಿದ್ಯುತ್‍ಗಾಗಿ ಜನರೇಟರ್‌ಗಳನ್ನು ಬಳಸಲಾಗುತ್ತಿದೆ.

ಈ ಮಧ್ಯೆ, ಕಾಶ್ಮೀರ ಹೆದ್ದಾರಿ ಮತ್ತು ಮೊಘಲ್ ರಸ್ತೆಯನ್ನು ವಾಹನ ಸಂಚಾರಕ್ಕಾಗಿ ಮುಚ್ಚಲಾಗಿರುವುದರಿಂದ ಕಣಿವೆಯು ದೇಶದ ಇತರ ಭಾಗಗಳಿಂದ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿದೆ.

ಇನ್ನು ಭಾರಿ ಹಿಮಪಾತದಿಂದಾಗಿ ಸತತ ಎರಡನೇ ದಿನವೂ ವೈಮಾನಿಕ ಸಂಚಾರ ಸ್ಥಗಿತಗೊಂಡಿದೆ.

ವರದಿಯ ಪ್ರಕಾರ, ಕಾಶ್ಮೀರದ ಮೇಲ್ಭಾಗದ ಪ್ರದೇಶಗಳಲ್ಲಿ, ವಿಶೇಷವಾಗಿ ಉತ್ತರ ಕಾಶ್ಮೀರದಲ್ಲಿ ಅನೇಕ ಸ್ಥಳಗಳಲ್ಲಿ 6 ಅಡಿಗಳಷ್ಟು ಹಿಮಪಾತ ದಾಖಲಾಗಿದೆ. ಹಿಮಪಾತದಿಂದಾಗಿ 200 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT