ಹಿಮಪಾತ 
ದೇಶ

ಕತ್ತಲೆಯಲ್ಲಿ ಕಾಶ್ಮೀರ: ಹಿಮಪಾತದಿಂದ ನಾಲ್ವರು ಯೋಧರು ಸೇರಿ 10 ಮಂದಿ ಸಾವು

ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಶ್ರೀನಗರ: ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಹಿಮಪಾತದ ನಡುವೆ ಬುಧವಾರ ರಾತ್ರಿಯಿಂದ ವಿದ್ಯುತ್ ಸರಬರಾಜು ಸಹ ಸ್ಥಗಿತಗೊಂಡಿರುವುದರಿಂದ ಕಣಿವೆ ರಾಜ್ಯ ಕತ್ತಲೆಯಲ್ಲಿ ಮುಳುಗಿದೆ.

ಕಣಿವೆಯಲ್ಲಿ ಬುಧವಾರ ರಾತ್ರಿಯಿಂದ ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ವಿದ್ಯುತ್ ಕಡಿತಗೊಂಡಿದೆ. ಈ ಸಂಸ್ಥೆಗಳಿಗೆ ವಿದ್ಯುತ್‍ಗಾಗಿ ಜನರೇಟರ್‌ಗಳನ್ನು ಬಳಸಲಾಗುತ್ತಿದೆ.

ಈ ಮಧ್ಯೆ, ಕಾಶ್ಮೀರ ಹೆದ್ದಾರಿ ಮತ್ತು ಮೊಘಲ್ ರಸ್ತೆಯನ್ನು ವಾಹನ ಸಂಚಾರಕ್ಕಾಗಿ ಮುಚ್ಚಲಾಗಿರುವುದರಿಂದ ಕಣಿವೆಯು ದೇಶದ ಇತರ ಭಾಗಗಳಿಂದ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿದೆ.

ಇನ್ನು ಭಾರಿ ಹಿಮಪಾತದಿಂದಾಗಿ ಸತತ ಎರಡನೇ ದಿನವೂ ವೈಮಾನಿಕ ಸಂಚಾರ ಸ್ಥಗಿತಗೊಂಡಿದೆ.

ವರದಿಯ ಪ್ರಕಾರ, ಕಾಶ್ಮೀರದ ಮೇಲ್ಭಾಗದ ಪ್ರದೇಶಗಳಲ್ಲಿ, ವಿಶೇಷವಾಗಿ ಉತ್ತರ ಕಾಶ್ಮೀರದಲ್ಲಿ ಅನೇಕ ಸ್ಥಳಗಳಲ್ಲಿ 6 ಅಡಿಗಳಷ್ಟು ಹಿಮಪಾತ ದಾಖಲಾಗಿದೆ. ಹಿಮಪಾತದಿಂದಾಗಿ 200 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT