ರವಿಶಂಕರ್ ಗುರೂಜಿ 
ದೇಶ

ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ: ಶ್ರೀ ಶ್ರೀ ರವಿಶಂಕರ್ ಗುರೂಜಿ ಆಹ್ವಾನಿಸಿದ ಪಾಕಿಸ್ತಾನ

ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಪಾಕಿಸ್ತಾನ ಆಹ್ವಾನಿಸಿದೆ ಎಂದು ತಿಳಿದುಬಂದಿದೆ. 

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಪಾಕಿಸ್ತಾನ ಆಹ್ವಾನಿಸಿದೆ ಎಂದು ತಿಳಿದುಬಂದಿದೆ. 

ಪಂಜಾಬ್ ರಾಜ್ಯದ ಗುರುದಾಸ್ ಪುರ ಜಿಲ್ಲೆಯಿಂದ ಪಾಕಿಸ್ತಾನದಲ್ಲಿರುವ ಕರ್ತಾರ್ಪುರ ದರ್ಬಾರ್ ಸಾಹೀಬ್'ಗೆ ಹೆದ್ದಾರಿ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೆ ಗುರೂಜಿಯವರಿಗೆ ಆಹ್ವಾನ ನೀಡಲಾಗಿದೆ. 

ಸಿಖ್ ಪಂಥದ ಸ್ಥಾಪಕ ಗುರುನಾನಕ್ ಅವರು ನಿರ್ಮಿಸಿದ್ದ ಪಾಕಿಸ್ತಾನದ ಕರ್ತಾರ್ಪುರದಲ್ಲಿರುವ ಗುರುದ್ವಾರಕ್ಕೆ ಭಾರತೀಯರು ಇನ್ನು ನೇರವಾಗಿ ಪ್ರವೇಶಿಸಲು ಸಾಧ್ಯ. ಭಾರತ ಹಾಗೂ ಪಾಕಿಸ್ತಾನ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕರ್ತಾರ್ಪುರ ಕಾರಿಡಾರ್ ಅನ್ನು ನ.9ರಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಉದ್ಘಾಟಿಸಲಿದ್ದಾರೆ. 

ಗುರುನಾನಕ್ ಅವರ 550ನೇ ಜನ್ಮದಿನಕ್ಕೂ ಮುನ್ನ ಕಾರಿಡಾರ್ ಬಳಕೆಗೆ ಲಭ್ಯವಾಗಲಿದ್ದು, ಸಿಖ್ ಸಮುದಾಯದ ದಶಕಗಳ ಬೇಡಿಕೆ ಕಾರ್ಯರೂಪಕ್ಕೆ ಬರುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT