ಮುರಳೀಧರ್ ರಾವ್ - ರಜನಿಕಾಂತ್ 
ದೇಶ

ರಜನಿಕಾಂತ್ ಬಿಜೆಪಿ ಸೇರಿಲ್ಲ: ಮುರಳೀಧರ್ ರಾವ್ ಸ್ಪಷ್ಟನೆ

ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಚೆನ್ನೈ: ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ರಜನಿಕಾಂತ್ ಅವರ ಬಗ್ಗೆ ಯಾವುದೇ ತಪ್ಪು ಕಲ್ಪನೆ ಇಲ್ಲ. ಅವರು ಬಿಜೆಪಿ ಸೇರಿದ್ದಾರೆ ಎಂದು ನಾವು ಯಾವತ್ತೂ ಹೇಳಿಲ್ಲ ಮತ್ತು ಅವರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಸಹ ಹೇಳಿಲ್ಲ ಎಂದು ಮುರಳೀಧರ್ ರಾವ್ ಅವರು ಹೇಳಿದ್ದಾರೆ.

ಇತ್ತೀಚಿಗೆ ಹೊಸದಾಗಿ 6 ಕೋಟಿ ಜನ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದರೊಂದಿಗೆ ನಮ್ಮ ಪಕ್ಷದ ಸದಸ್ಯರ ಸಂಖ್ಯೆ 17 ರಿಂದ 18 ಕೋಟಿಗೆ ಏರಿಕೆಯಾಗಿದೆ ಎಂದರು.

ಇಂದು ಬೆಳಗ್ಗೆಯಷ್ಟೇ ಹಿರಿಯ ನಟ ರಜನಿಕಾಂತ್ ಅವರು, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿ ಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚಿಗೆ ತಮಿಳಿನ ಸಂತ ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿಕರಣಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನಿಕಾಂತ್, ತಿರುವಳ್ಳುವರ್ ಜೊತೆಗೆ  ತಮ್ಮನ್ನು ಕೇಸರಿಕರಣಗೊಳಿಸುವ  ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT