ಅಬ್ದುಲ್ ನಜೀರ್ 
ದೇಶ

ಅಯೋಧ್ಯೆ ತೀರ್ಪು ನೀಡಿದ ಪಂಚಪೀಠದ ನ್ಯಾ. ಅಬ್ದುಲ್ ನಜೀರ್ ಕನ್ನಡಿಗರು!

ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ...

ಮಂಗಳೂರು: ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ, ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಮೀನು ನೀಡಲು ತನ್ನ ತೀರ್ಪಿನಲ್ಲಿ ಆದೇಶಿಸಿದೆ.

ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ಪಂಚಪೀಠವೂ ಸಿಜೆಐ ರಂಜನ್ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿತ್ತು .

ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಅವರ ಹುಟ್ಟೂರು. 

ಜ. 5, 1958ರಲ್ಲಿ ಹುಟ್ಟಿದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಬೆಳುವಾಯಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಆ ಬಳಿಕ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ಆ ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.

ಅಬ್ದುಲ್ ನಜೀರ್ ಅವರು ಇಂದು ಅಯೋಧ್ಯೆ ಪ್ರಕರಣದ ಐತಿಹಾಸಿಕ ತೀರ್ಪು ನೀಡಿದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT