ಸಂಗ್ರಹ ಚಿತ್ರ 
ದೇಶ

ನಮಗೆ ಮತ್ತೊಂದು ಬಾಬ್ರಿ ಮಸೀದಿ ಬೇಡ, ಶಾಂತಿ ಬೇಕು: ಭಾರತೀಯ ಯುವ ಮುಸ್ಲಿಮರು 

60 ವರ್ಷಗಳಿಗೂ ಹೆಚ್ಚು ಕಾಲ ವಿವಾದದಲ್ಲಿರುವ ರಾಮಜನ್ಮಭೂಮಿ ವಿವಾದಕ್ಕೆ ಶನಿವಾರ ಸುಪ್ರೀಂಕೋರ್ಟ್ ತೆರೆ ಎಳೆಯಲಿದ್ದು, ಈ ನಡುವೆ ಹೇಳಿಕೆ ನೀಡಿರುವ ಭಾರತೀಯ ಯುವ ಮುಸ್ಲಿಮರು ನಮಗೆ ಮತ್ತೊಂದು ಬಾಬ್ರಿ ಮಸೀದಿ ಬೇಡ, ಶಾಂತಿ ಬೇಕೆಂದು ಹೇಳಿದ್ದಾರೆ. 

ನವದೆಹಲಿ: 60 ವರ್ಷಗಳಿಗೂ ಹೆಚ್ಚು ಕಾಲ ವಿವಾದದಲ್ಲಿರುವ ರಾಮಜನ್ಮಭೂಮಿ ವಿವಾದಕ್ಕೆ ಶನಿವಾರ ಸುಪ್ರೀಂಕೋರ್ಟ್ ತೆರೆ ಎಳೆಯಲಿದ್ದು, ಈ ನಡುವೆ ಹೇಳಿಕೆ ನೀಡಿರುವ ಭಾರತೀಯ ಯುವ ಮುಸ್ಲಿಮರು ನಮಗೆ ಮತ್ತೊಂದು ಬಾಬ್ರಿ ಮಸೀದಿ ಬೇಡ, ಶಾಂತಿ ಬೇಕೆಂದು ಹೇಳಿದ್ದಾರೆ. 

ವಿವಾದ ಸಂಬಂಧ ಉತ್ತರಪ್ರದೇಶದಲ್ಲಿ ಹಿಂಸಾಚಾರ ಸೃಷ್ಟಿಯಾದಾಗ ಜಾವೆದ್ ರೆಹ್ಮಾನ್ ಎಂಬುವವರು ರಾಜ್ಯವನ್ನೇ ತೊರೆದು ಬೇರೆಡೆಗೆ ಸ್ಥಳಾಂತರಗೊಂಡಿದ್ದರು. ವಿವಾದ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜಾವೆದ್ ಅವರು, ನ್ಯಾಯಾಲಯದ ತೀರ್ಪು ದೇಗುಲದ ಪರವಾಗಿ ಬಂದರೂ ಸರಿ. ದೇವರ ಹೆಸರಿನಲ್ಲಿ ನಮ್ಮ ಮನೆಗಳು ಸುಟ್ಟುಹೋಗುವುದು ನಮಗೆ ಬೇಡ ಎಂದು ಹೇಳಿದ್ದಾರೆ. 

ಕಾಲೇಜು ವಿದ್ಯಾರ್ಥಿನಿ ರಿಯಾ ಖಾನ್ ಮಾತನಾಡಿ, ಭಾರತದಲ್ಲಿರುವ ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುವುದು ನಮಗೆ ಬೇಡ. ಸುಪ್ರೀಂಕೋರ್ಟ್ ಮೇಲೆ ನಮಗೆ ನಂಬಿಕೆ ಇದೆ. ನಮಗೆ ಶಾಂತಿ ಬೇಕೆಂದು ತಿಳಿಸಿದ್ದಾರೆ. 

ಹಿಂಸಾಚಾರ ನೋಡುವುದು ನಮಗಿಷ್ಟವಿಲ್ಲ. ದಾವೆ ಹೂಡಿರುವ ಮೂವರು ಕಕ್ಷಿದಾರರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ವಿವಾದಕ್ಕೆ ತೆರೆ ಎಳೆಯಬೇಕು ಎಂದು ಅಮಾನುಲ್ ಅಖ್ತರ್ ಎಂಬುವವರು ಹೇಳಿದ್ದಾರೆ. 

ವಿವಾದಿತ ಪ್ರದೇಶದಲ್ಲಿ ಆಸ್ಪತ್ರೆ ಹಾಗೂ ಶಾಲೆಗಳನ್ನು ನಿರ್ಮಾಣ ಮಾಡಬೇಕು. ಇದು ಉತ್ತರಪ್ರದೇಶ ರಾಜ್ಯದಲ್ಲಿ ಕಡು ಬಡತನದಲ್ಲಿರುವ ಜನರಿಗೆ ಸಹಾಯವಾಗಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!