ಮಮತಾ ಬ್ಯಾನರ್ಜಿ 
ದೇಶ

ಅಯೋಧ್ಯೆ ತೀರ್ಪು:'ಮೌನ'ಕ್ಕೆ ಶರಣಾದ ಟಿಎಂಸಿ 

ಅಯೋಧ್ಯೆ ವಿವಾದ ಸಂಬಂಧ ಶನಿವಾರ ಸುಪ್ರೀಂ ಕೋರ್ಟ್ ತೀರ್ಪು ಹೊರಬಂದಿದ್ದು ಈ ಬಗೆಗೆ ಕಾಂಗ್ರೆಸ್, ಬಿಜೆಪಿ, ಸಿಪಿಐ೯ಎಂ) ಸೇರಿ ರಾಷ್ಟ್ರದ ಪ್ರಮುಖ ಪಕ್ಷಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೂ ಇದುವರೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾತ್ರ ಯಾವ ಪ್ರತಿಕ್ರಿಯೆ ನೀಡದೆ ಮೌನ ಕಾಯ್ದುಕೊಂಡಿದೆ. 

ಕೋಲ್ಕತ್ತಾ: ಅಯೋಧ್ಯೆ ವಿವಾದ ಸಂಬಂಧ ಶನಿವಾರ ಸುಪ್ರೀಂ ಕೋರ್ಟ್ ತೀರ್ಪು ಹೊರಬಂದಿದ್ದು ಈ ಬಗೆಗೆ ಕಾಂಗ್ರೆಸ್, ಬಿಜೆಪಿ, ಸಿಪಿಐ೯ಎಂ) ಸೇರಿ ರಾಷ್ಟ್ರದ ಪ್ರಮುಖ ಪಕ್ಷಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೂ ಇದುವರೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾತ್ರ ಯಾವ ಪ್ರತಿಕ್ರಿಯೆ ನೀಡದೆ ಮೌನ ಕಾಯ್ದುಕೊಂಡಿದೆ. ಪಕ್ಷದ ಮುಖ್ಯಸ್ಥ ಮಮತಾ ಬ್ಯಾನರ್ಜಿ ಸೇರಿದಂತೆ ಆಡಳಿತಾರೂಢ  ಟಿಎಂಸಿಯ ಒಬ್ಬ ನಾಯಕರೂ ಸಹ ಈ ತೀರ್ಪಿನ ಬಗ್ಗೆ ಸಂಜೆ 5 ಗಂಟೆಯವರೆಗೂ ಯಾವ ಪ್ರತಿಕ್ರಿಯೆ ನೀಡಿಲ್ಲ.

ತೀರ್ಪಿನ ನಂತರ ಪಶ್ಚಿಮ ಬಂಗಾಳ ರಾಜ್ಯಾದ್ಯಂತ ಪರಿಸ್ಥಿತಿ ಶಾಂತಿಯುತವಾಗಿದೆ. ರಾಜ್ಯದ ಯಾವುದೇ ಭಾಗದಲ್ಲಿಯೂ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಎಂಸಿ ಮೂಲಗಳ ಪ್ರಕಾರ, ಪಕ್ಷದ ಉನ್ನತ ನಾಯಕರಿಂದ "ಕಟ್ಟುನಿಟ್ಟಿನ ಸೂಚನೆ" ಬಂದಿದ್ದು, ತೀರ್ಪಿನ ಬಗ್ಗೆ "ಒಂದೇ ಒಂದು ಮಾತನ್ನು" ಆಡಬಾರದೆಂದು ಸೂಚಿಸಿದೆ

"ಈ ವಿಷಯದ ಬಗ್ಗೆ ಮಾತನಾಡಬಾರದೆಂದು ನಮಗೆ ಸೂಚನೆ ಇದೆ. ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಾತ್ರ ಅಗತ್ಯವಿದ್ದರೆ ಅದರ ಬಗ್ಗೆ ಮಾತನಾಡುತ್ತಾರೆ. ಅಥವಾ ಅವರಿಂದ ನಿಯೋಜಿತರಾದ ಇತರೆ ನಾಯಕರು ಅದರ ಕುರಿತಂತೆ ಮಾತನಾಡಬಹುದು. " ಹೆಸರು ಬಹಿರಂಗಪಡಿಸಲು ಇಚ್ಚಿಸದ ಟಿಎಂಸಿಯ ಹಿರಿಯ ಮುಖಂಡರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. - .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT