ನರಿ ಬುದ್ಧಿ ಪ್ರದರ್ಶಿಸಿದ ಪಾಕ್: ಗುರುದ್ವಾರದಲ್ಲಿ ಬಾಂಬ್ ತುಣುಕು ಪ್ರದರ್ಶಿಸಿ ಭಾರತದ ವಿರುದ್ಧವೇ ಸಿಕ್ಖರ ಎತ್ತಿಕಟ್ಟಲು ಕುತಂತ್ರ 
ದೇಶ

ನರಿ ಬುದ್ಧಿ ಪ್ರದರ್ಶಿಸಿದ ಪಾಕ್: ಗುರುದ್ವಾರದಲ್ಲಿ ಬಾಂಬ್ ತುಣುಕು ಪ್ರದರ್ಶಿಸಿ ಭಾರತದ ವಿರುದ್ಧವೇ ಸಿಕ್ಖರ ಎತ್ತಿಕಟ್ಟಲು ಕುತಂತ್ರ

ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಚಾಲನೆ ಸಿಕ್ಕಾಗಿನಿಂದಲೂ ಒಂದಲ್ಲಾ ಒಂದು ರೀತಿ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಭಾರತೀಯ ಸಿಖ್ಖರನ್ನು ಭಾರತದ ವಿರುದ್ಧವೇ ಎತ್ತಿಕಟ್ಟುವ ನಿಟ್ಟಿನಲ್ಲಿ ಸಂಚು ರೂಪಿಸಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಚಾಲನೆ ಸಿಕ್ಕಾಗಿನಿಂದಲೂ ಒಂದಲ್ಲಾ ಒಂದು ರೀತಿ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಭಾರತೀಯ ಸಿಖ್ಖರನ್ನು ಭಾರತದ ವಿರುದ್ಧವೇ ಎತ್ತಿಕಟ್ಟುವ ನಿಟ್ಟಿನಲ್ಲಿ ಸಂಚು ರೂಪಿಸಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಕರ್ತಾರ್ಪುರದ ಗುರುದ್ವಾರದ ಬಳಿ ಪಾಕಿಸ್ತಾನ ಸರ್ಕಾರವು ಪ್ರದರ್ಶನ ಸ್ಥಳವೊಂದನ್ನು ತೆರೆದಿದ್ದು, ಅಲ್ಲಿ ಬಾಂಬ್'ನ ತುಣುಕನ್ನು ಪ್ರದರ್ಶನಕ್ಕೆ ಇಟ್ಟಿದೆ. 

1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ವನೇಳೆ ದರ್ಬಾರ್ ಸಾಹಿಬ್ ಪಕ್ಕದಲ್ಲಿಯೇ ಬಿದ್ದ, ಭಾರತದ ತುಣುಕನ್ನು ಅಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ. ಜೊತೆಗೆ ಬಾಂಬ್'ನ ಕೆಳಗೆ ನೀಡಿರುವ ಮಾಹಿತಿಯಲ್ಲಿ ಯುದ್ಧದ ವೇಳೆ ಭಾರತೀಯ ಸೇನಾ ಪಡೆಗಳು ದರ್ಬಾರ್ ಸಾಹಿಬ್ ಗುರುದ್ವಾರವನ್ನು ಧ್ವಂಸ ಮಾಡಲು ಬಾಂಬ್ ದಾಳಿ ನಡೆಸಿತ್ತು. ಅದರ ಕುರುಹು ಈ ಬಾಂಬ್ ತುಣುಕು. ಆದರೆ, ದೇವರ ಆಶೀರ್ವಾದದಿಂದ ಈ ಅನಾಹುತ ತಪ್ಪಿದೆ ಎಂದು ಅಡಿಬರಹ ಬರೆದಿದೆ. 

ಇದು ಸಿಖ್ಖರನ್ನು ಭಾರತದ ಸೈನಿಕರ ವಿರುದ್ಧ ಪ್ರಚೋದಿಸಲು ಪಾಕಿಸ್ತಾನ ಈ ರೀತಿಯ ಕುತಂತ್ರ ನೀತಿಯನ್ನು ಅನುಸರಿಸಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT