ಅಯೋಧ್ಯೆ ತೀರ್ಪಿನ ಬಗ್ಗೆ ವಿವಾದಾತ್ಮಕ ಲೇಖನ: ಕ್ಷಮೆ ಕೋರಿದ ನ್ಯಾಷನಲ್ ಹೆರಾಲ್ಡ್ 
ದೇಶ

ಅಯೋಧ್ಯೆ ತೀರ್ಪಿನ ಬಗ್ಗೆ ವಿವಾದಾತ್ಮಕ ಲೇಖನ: ಕ್ಷಮೆ ಕೋರಿದ ನ್ಯಾಷನಲ್ ಹೆರಾಲ್ಡ್ 

ಅಯೋಧ್ಯೆ ತೀರ್ಪಿನ ಬಗ್ಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಸಂಪಾದಕೀಯ ಪುಟದ ಲೇಖನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪತ್ರಿಕೆ ಕ್ಷಮೆ ಕೋರಿದೆ.

ಅಯೋಧ್ಯೆ ತೀರ್ಪಿನ ಬಗ್ಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಸಂಪಾದಕೀಯ ಪುಟದ ಲೇಖನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪತ್ರಿಕೆ ಕ್ಷಮೆ ಕೋರಿದೆ.

ತನಗೂ ಲೇಖನಕ್ಕೂ ಸಂಬಂಧವಿಲ್ಲ, ಪ್ರಕಟಿತ ಲೇಖನದ ದೃಷ್ಟಿಕೋನಗಳಿಗೆ ಲೇಖಕರೇ ಜವಾಬ್ದಾರರಾಗಿರುತ್ತಾರೆಯೇ ಹೊರತು, ಆ ಲೇಖನ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ದೃಷ್ಟಿಕೋನವಾಗಿರುವುದುಲ್ಲ ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೇಳಿದೆ.

1992 ರ ಅಯೋಧ್ಯೆ ಘಟನೆ ಹಾಗೂ 2019 ರ ಕೋರ್ಟ್ ತೀರ್ಪಿನ ಚಿತ್ರಗಳನ್ನು ಒಟ್ಟಿಗೆ ಇಟ್ಟು, ಬಲಪ್ರಯೋಗ ಹಾಗೂ ರಕ್ತಪಾತದಿಂದ ಕಟ್ಟಿದ ದೇವಸ್ಥಾನದಲ್ಲಿ ದೇವರು ನೆಲೆಸುತ್ತಾನಾ? ಒಂದು ವೇಳೆ ದೇವರು ನೆಲೆಸಿದರೂ  ಅಂಥಹ ದೇವಾಲಯದಲ್ಲಿ ನಾವು ಪ್ರಾರ್ಥನೆ ಸಲ್ಲಿಸಬಹುದಾ? ಎಂಬ ಶೀರ್ಷಿಕೆ ನೀಡಲಾಗಿತ್ತು. ನ್ಯಾಷನಲ್ ಹೆರಾಲ್ಡ್ ನ ಈ ಯಡವಟ್ಟು ವಿವಾದಕ್ಕೆ ಗುರಿಯಾಗಿ ಬಿಜೆಪಿ, ಕಾಂಗ್ರೆಸ್ ನ ಮುಖವಾಣಿಯಾಗಿರುವ ನ್ಯಾಷನಲ್ ಹೆರಾಲ್ಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ ಎಐಸಿಸಿ ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಮಾಡಿರುವ ಪ್ರಮಾದಕ್ಕೆ ಕ್ಷಮೆ ಕೋರಬೇಕೆಂದು ಆಗ್ರಹಿಸಿತ್ತು.

ಈ ವಿವಾದಾತ್ಮಕ ಲೇಖನದ ಮೂಲಕ ನ್ಯಾಷನಲ್ ಹೆರಾಲ್ಡ್ ಸುಪ್ರೀಂ ಕೋರ್ಟ್ ತೀರ್ಪನ್ನು ಅವಮಾನಿಸಿ ದೇಶಕ್ಕೆ ಮುಜುಗರ ಉಂಟುಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT