ಸಂಗ್ರಹ ಚಿತ್ರ 
ದೇಶ

ಅಯೋಧ್ಯೆ ತೀರ್ಪು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ: 90 ಮಂದಿಯ ಬಂಧನ

ಆಯೋಧ್ಯೆ ತೀರ್ಪು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಸುಮಾರು 90 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಆಯೋಧ್ಯೆ ತೀರ್ಪು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಸುಮಾರು 90 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಅಯೋಧ್ಯೆ ತೀರ್ಪು ಹೊರಬಿದ್ದ ಬಳಿಕ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ತೀವ್ರ ನಿಗಾ ಇರಿಸಿದ್ದು, ಕೋಮು ಸೌಹಾರ್ಧ ಕದಡುವಂತಹ ಪೋಸ್ಚ್ ಗಳ ಮೇಲೆ ಹದ್ದಿನಕಣ್ಣಿದ್ದಾರೆ. ಪರಿಣಾಮ ಈ ವರೆಗೂ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಸುಮಾರು 90 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೀರ್ಪು ಹೊರಬಿದ್ದ ಶನಿವಾರದಿಂದ ಈ ವರೆಗೂ 90 ಮಂದಿಯನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶವೊಂದರಲ್ಲೇ 77 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಭಾನುವಾರ ಒಂದೇ ದಿನ 40 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಆಯೋಧ್ಯ ತೀರ್ಪಿನ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದ ಸುಮಾರು 8,275 ಪೋಸ್ಟ್ ಗಳನ್ನು ಪೊಲೀಸರು ಶೋಧಿಸಿದ್ದು, ಈ ಪೈಕಿ ಭಾನುವಾರ ಒಂದೇ ದಿನ 4,563 ಪೋಸ್ಟ್ ಗಳನ್ನು ವೀಕ್ಷಿಸಿದ್ದಾರೆ.

ಇದಲ್ಲದೆ ಮಧ್ಯ ಪ್ರದೇಶದ ಸಿಯೋನಿಯಲ್ಲಿ 8 ಮಂದಿಯನ್ನು, ಗ್ವಾಲಿಯರ್ ನಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಅಂತೆಯೇ ಗ್ವಾಲಿಯರ್ ನಲ್ಲಿ ಅಯೋಧ್ಯೆ ತೀರ್ಪು ಹೊರ ಬಿದ್ದ ಬೆನ್ನಲ್ಲೇ ಪಟಾಕಿ ಸಿಡಿಸಿ ಸಂಭಮಿಸಿದ್ದ ಜೈಲು ವಾರ್ಡನ್ ಮಹೇಶ್ ಎಂಬುವವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಗ್ವಾಲಿಯರ್ ನಲ್ಲಿ ಸಂಭ್ರಮಾಚರಣೆ ನಿಷೇಧದ ಹೊರತಾಗಿಯೂ ಮಹೇಶ್ ಪಟಾಕಿ ಸಿಡಿಸಿ ಹಿರಿಯ ಅಧಿಕಾರಿಗಳ ಆಕ್ರೋಶಕ್ಕೆ ತುತ್ತಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT