ದೇಶ

ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು! 

Srinivas Rao BV

ಮುಂಬೈ: ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. 

ನ.11 ರಂದು ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲರ ಬಳಿ ನಾವು ಸರ್ಕಾರ ರಚನೆಗೆ ಸಂಬಂಧಿಸಿದಂತೆ 2 ದಿನ ಕಾಲಾವಕಾಶ ಕೋರಿದ್ದೆವು, ಆದರೆ ಹೆಚ್ಚಿನ ಕಾಲಾವಕಾಶ ನೀಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಸ್ಥಿರ ಸರ್ಕಾರ ರಚಿಸಲು ಬಯಸುತ್ತೇವೆ. ಹೆಚ್ಚಿನ ಸಮಯ ನೀಡಲು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. 

SCROLL FOR NEXT