ಉದ್ಧವ್ ಠಾಕ್ರೆ 
ದೇಶ

'ಮಹಾ' ಹೈಡ್ರಾಮಾ: ಎನ್'ಡಿಎ ಕೈಬಿಟ್ಟು ಕಾಂಗ್ರೆಸ್-ಎನ್'ಸಿಪಿ ಜೊತೆ ಸರ್ಕಾರ ರಚನೆಗೆ ಸಿದ್ಧ ಎಂದ ಶಿವಸೇನೆ!

ಮಹಾರಾಷ್ಟ್ರ ಸೋಮವಾರ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ದಿನ ಬಿಜೆಪಿ ಜೊತೆಗೆ ಇರಿಸು-ಮುನಿಸು ಪ್ರದರ್ಶಿಸುತ್ತಿದ್ದ ಶಿವಸೇನೆ ಇದೀಗ ಎನ್'ಡಿಎಗೆ ಕೈಕೊಟ್ಟು, ಕಾಂಗ್ರೆಸ್-ಎನ್'ಸಿಪಿ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಿದ್ಧ ಎಂದು ಹೇಳಿದೆ.

ಮುಂಬೈ: ಮಹಾರಾಷ್ಟ್ರ ಸೋಮವಾರ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ದಿನ ಬಿಜೆಪಿ ಜೊತೆಗೆ ಇರಿಸು-ಮುನಿಸು ಪ್ರದರ್ಶಿಸುತ್ತಿದ್ದ ಶಿವಸೇನೆ ಇದೀಗ ಎನ್'ಡಿಎಗೆ ಕೈಕೊಟ್ಟು, ಕಾಂಗ್ರೆಸ್-ಎನ್'ಸಿಪಿ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಿದ್ಧ ಎಂದು ಹೇಳಿದೆ. 

ಈ ಕುರಿತು ಮಾತನಾಡಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು, ಬಿಜೆಪಿ ನೇತೃತ್ವದ ಎನ್'ಡಿಎ ಜೊತೆಗಿನ ಮೈತ್ರಿ ಮುರಿಯಲು ಶಿವಸೇನೆ ನಿರ್ಧರಿಸಿದ್ದು, ಕಾಂಗ್ರೆಸ್ ಹಾಗೂ ಎನ್'ಸಿಪಿ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ತೀರ್ಮಾನಿಸಿದ್ದೇವೆಂದು ಹೇಳಿದ್ದಾರೆ. 

ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಯವರು ಸಂಪುಟದಲ್ಲಿ ಶಿವಸೇನೆಯಿಂದ ಏಕೈಕ ಕೇಂದ್ರ ಸಚಿವರಾಗಿದ್ದ ಅರವಿಂದ ಸಾವಂತ್ ಅವರನ್ನು ಹುದ್ದೆಯಿಂದ ದೂರ ಇಡುವಂತೆ ನಿರ್ದೇಶಿಸಿದ್ದರು. ಇತ್ತೀಚಿನ ಬೆಳವಣಿಗೆಗಳಲ್ಲಿ ಬಿಜೆಪಿ ನಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದು, ನಮ್ಮನ್ನು ಅಧಿಕಾರದಿಂದ ಸಂಪೂರ್ಣವಾಗಿ ದೂರ ಇಡಲು ನಿರ್ಧರಿಸಿದಂತಿದೆ. ಹೀಗಿರುವಾಗ ಎನ್'ಡಿಎ ಜೊತೆಗೆ ಮುಂದುವರೆಯುವುದಾದರೂ ಹೇಗೆ?  ಎಂದು ಪ್ರಶ್ನಿಸಿರುವ ಅವರು, ಇದೀಗ ನಾವು ಮೊದಲ ಹೆಜ್ಜೆಯನ್ನು ಇಟ್ಟಿದ್ದೇವೆ. ಎಲ್ಲಾ ಆಯಾಮಗಳ ಬಗ್ಗೆ ಚಿಂದನೆ ನಡೆಸಿ ನಿರ್ಧಾರ ಕೈಗೊಳ್ಳಬೇಕಿರುವುದು ಇನ್ನು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ. 

ಎನ್'ಸಿಪಿ ನಾಯಕ ಪ್ರಫುಲ್ ಪಟೇಲ್ ಮಾತನಾಡಿ, ನಮಗೆ ಬಹುಮತವಿಲ್ಲ. ಬಹುಮತ ಇರುವವರು ಸರ್ಕಾರ ರಚಿಸಲು. ನಮ್ಮ ನಿಲುವವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಸರ್ಕಾರ ರಚಿಸುವುದು ಸುಲಭದ ವಿಚಾರವಲ್ಲ. ಸರ್ಕಾರ ರಚನೆ ವೇಳೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಈ ವರೆಗೂ ನಾವು ಯಾರೊಂದಿಗೂ ಮೈತ್ರಿಯಾಗಲೀ, ಒಪ್ಪಂದಗಳಾಗಲಿ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT