ಹೆಚ್.ಡಿ.ದೇವೇಗೌಡ 
ದೇಶ

ಉಪ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನ ಪಡೆದರೂ ಸರ್ಕಾರಕ್ಕೆ ಅಪಾಯವಿಲ್ಲ: ಬಿಜೆಪಿಗೆ ದೇವೇಗೌಡ ಅಭಯ

ಉಪಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಬಿಜೆಪಿ ಸರ್ಕಾರಕ್ಕೆ ಅಪಾಯ ಎದುರಾಗುವ ಸಾಧ್ಯತೆ ಕಡಿಮೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಅಭಯ ನೀಡಿದ್ದಾರೆ.

ಕಲಬುರ್ಗಿ: ಉಪಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಬಿಜೆಪಿ ಸರ್ಕಾರಕ್ಕೆ ಅಪಾಯ ಎದುರಾಗುವ ಸಾಧ್ಯತೆ ಕಡಿಮೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಅಭಯ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಬರುವ ಸಾಧ್ಯತೆಯನ್ನು ತಳ್ಳಿಹಾಕಿದರು. ಸದ್ಯದ ಪರಿಸ್ಥಿತಿ ನೋಡಿದರೆ ಉಪ ಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎನ್ನುವ ಮೂಲಕ ಬಿಜೆಪಿ ಸರ್ಕಾರದ ರಕ್ಷಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗಿದೆ ಎಂಬ ಸಂದೇಶ ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸದ್ಯಕ್ಕೆ ಒಂದಾಗಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿಗೆ ಉಪಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದರೂ ಸರ್ಕಾರ ಪತನವಾಗುವುದಿಲ್ಲ. ಬಿಜೆಪಿ ಪಕ್ಷದೊಳಗೆ ಆಂತರಿಕ ಸಮಸ್ಯೆ ಉಲ್ಬಣ ವಾಗದಿದ್ದರೆ ಮಧ್ಯಂತರ ಚುನಾವಣೆ ಎದುರಾಗುವ ಸಂಭವ ಇಲ್ಲ. ಉಪ ಚುನಾವಣೆಯಲ್ಲಿ ಎಲ್ಲಾ15 ಕ್ಷೇತ್ರಗಳಿಗೂ ಪಕ್ಷದ ಅಭ್ಯರ್ಥಿ ಹಾಕಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು.

ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಐದಾರು ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಬಲ ಪೈ ಪೋಟಿ ನೀಡಬಲ್ಲದು. ಪಕ್ಷದ ಅಸ್ತಿತ್ವದ ದೃಷ್ಟಿಯಿಂದ ಉಳಿದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪಕ್ಷದ ಶಕ್ತಿ ಇರುವ ಕಡೆ ಸ್ಪರ್ಧಿಸುತ್ತೇವೆ ಎಂದು ಅವರು ಹೇಳಿದರು.

ನಮ್ಮ ಪಕ್ಷಕ್ಕೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡುವ ಶಕ್ತಿ ಹೊಂದಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ನನಗೆ ಈಗ ಪಕ್ಷ ಕಟ್ಟಬೇಕು, ಸಂಘಟನೆ ಮಾಡಬೇಕೆಂಬ ಹುಚ್ಚಿದೆ. ಉಪಚುನಾವಣೆಯಲ್ಲಿ ಹೋರಾಟ ಮಾಡುವುದು ನಿಶ್ಚಿತ ಎಂದು ಹೇಳುವ ಮೂಲಕ ಉಪ ಚುನಾವಣೆಯಲ್ಲಿ ಪೈಪೋಟಿ ನೀಡಲು ಸಿದ್ಧ ಎಂದರು.

2018ರ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯ ಮಂತ್ರಿ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಅವರು ಬೇಡ ಎಂದು ಹೇಳಿದರು. ಹೀಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಆಯ್ಕೆಯಾದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಪ್ರಮುಖ ನಾಯಕರನ್ನು ತಮ್ಮ ಬಳಿ ಕಳುಹಿಸಿ ನಿಮ್ಮ ಮಗ ಮುಖ್ಯಮಂತ್ರಿಯಾಗಲಿ ಎಂದು ಹೇಳಿದರು. ವಿಪರ್ಯಾಸವೆಂದರೆ ಹೈಕಮಾಂಡ್ ಒಪ್ಪಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಖರ್ಗೆ ಹೇಳಿದ್ದರು ಎಂದು ಹೇಳುವ ಮೂಲಕ ಖರ್ಗೆ ಮುಖ್ಯಮಂತ್ರಿ ಆಗುವುದನ್ನು ಕಾಂಗ್ರೆಸ್ ನಾಯಕರೇ ತಪ್ಪಿಸಿದರು ಎಂದು ಹೊಸ ವಿವಾದ ಹುಟ್ಟು ಹಾಕಿದರು.

ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಬೇಕು ಎಂದು ಕಲಬುರಗಿಗೆ ಬಂದಿದ್ದೇನೆ. ಇಲ್ಲಿ ಒಂದು ಕಾಲದಲ್ಲಿ ನಮ್ಮ ಶಕ್ತಿ ಬಹಳ ಇತ್ತು. ದುರಂತ ಅಂದರೆ ಈಗ ನಮ್ಮ ಶಕ್ತಿ ಕುಂದಿದೆ. ಹೀಗಾಗಿ ಜನರು ಪಕ್ಷಕ್ಕೆ ಶಕ್ತಿ ಕೊಟ್ಟರೆ ಮತ್ತೆ ಪಕ್ಷ ಕಟ್ಟುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಅಸ್ತಿತ್ವ ಉಳಿಸಿಕೊಂಡಿದೆ. ನಾನು ಈಗ ಸೋತಿದ್ದೇನೆ. 13ನೇ ಲೋಕಸಭಾ ಚುನಾವಣೆಯಲ್ಲಿ ನಿಲುವುದಿಲ್ಲ ಎಂದು ಹೇಳಿ ಹೊರಗಡೆ ಬಂದಿದ್ದೆ. ಆದರೆ ವಿಧಿ ಎಳೆದು ಕೊಂಡು ತುಮಕೂರಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸುವಂತಾಯಿತು. ಆ ಮೂಲಕ ಮೂರನೇ ಸೋಲು ಕಂಡೆ. ಸೋತರೂ ಈ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದರು.

ರಾಜಕೀಯದಲ್ಲಿ ಯಾರೂ ಶಾಶ್ವತ ಶತೃಗಳಲ್ಲ. ಹಾಗೇ ಶಾಶ್ವತ ಮಿತ್ರರೂ ಅಲ್ಲ. ಯಡಿಯೂರಪ್ಪ ಮನೆ ಬಾಗಿಲಿಗೂ ಹೋಗುವುದಿಲ್ಲ. ಸಿದ್ದರಾಮಯ್ಯ ಮನೆ ಬಾಗಿಲಿಗೂ ಹೋಗುವುದಿಲ್ಲ. ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT