ಅಯೋಧ್ಯಾ 
ದೇಶ

ಅಯೋಧ್ಯೆ ತೀರ್ಪು: ಮಸೀದಿಗೆ 5 ಎಕರೆ ಭೂಮಿ ಯಾಕೆ..? ಮಹಾಸಭಾದಿಂದ ಪರಿಶೀಲನಾ ಅರ್ಜಿ?

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ನವದೆಹಲಿ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಯೋಧ್ಯೆಯ ಪ್ರಮುಖ ಸ್ಥಳದಲ್ಲೇ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಬಾಬರಿ ಮಸೀದಿ ಪರ ಹೋರಾಡುತ್ತಿದ್ದ ಸುನ್ನಿ ವಕ್ಫ್ ಬೋರ್ಡ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು ಈ ನಿರ್ದೇಶನದ ಬಗ್ಗೆ ಹಿಂದೂ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಪರಿಶೀಲನಾ ಅರ್ಜಿ ಸಲ್ಲಿಸಲು ಅಧ್ಯಯನ ಮಾಡುತ್ತಿದ್ದೇವೆ ಎಂದು ಹಿಂದೂ ಮಹಾಸಭಾ ಹೇಳಿದೆ.

ಅಯೋಧ್ಯೆಯಲ್ಲಿ ದೇವಾಲಯ ಇತ್ತು ಎಂದು ಸಾಬೀತಾದರೆ ಸುನ್ನಿ ವಕ್ಫ್ ಬೋರ್ಡ್ ಗೆ ಯಾಕೆ ಭೂಮಿಯನ್ನು ನೀಡಬೇಕು. ಹೀಗಾಗಿ ಪ್ರಸ್ತುತ ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಅಧ್ಯಯನ ಮಾಡುತ್ತಿದ್ದೇವೆ. ನಂತರ ಪರಿಶೀಲನಾ ಅರ್ಜಿಯನ್ನು ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷ ಶಿಶಿರ್ ಚತುರ್ವೇದಿ ಹೇಳಿದ್ದಾರೆ. 

ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಲಾಗಿದೆ. ಹೀಗಾಗಿ ಅವರಿಗೆ ಅಯೋಧ್ಯೆಯಲ್ಲೇ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ: ದೇಶಾದ್ಯಂತ ಶೋಕಾಚರಣೆ; ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ಊಸರವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!