ದೆಹಲಿಯ ಶಾಂತಿವನದಲ್ಲಿ ಪಂಡಿತ್ ಜವಹರಲಾಲ್ ನೆಹರೂ ಸಮಾಧಿಗೆ ಪುಷ್ಪ ನಮನ 
ದೇಶ

ನೆಹರೂ ಜನ್ಮದಿನ: ದೇಶಾದ್ಯಂತ ಮಕ್ಕಳ ದಿನಾಚರಣೆ, ಗಣ್ಯರಿಂದ ಸ್ಮರಣೆ 

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 


ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಶಾಂತಿವನಕ್ಕೆ ತೆರಳಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.


ಪಂಡಿತ್ ನೆಹರೂ ಅವರ ಜಯಂತಿ ಸ್ಮರಣಾರ್ಥ ಶಾಂತಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದಾರೆ. 
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರ ಸಾಧನೆಯನ್ನು ಸ್ಮರಿಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನೆಹರು ಅವರ ಜನ್ಮದಿನಾಚರಣೆಯನ್ನು ನಾವು ದೇಶದ ಮೊದಲ ಪ್ರಧಾನಿ, ಅತ್ಯುತ್ತಮ ಆಡಳಿತಗಾರ, ದೂರದೃಷ್ಟಿತ್ವ ಹೊಂದಿದ್ದ ವ್ಯಕ್ತಿ, ವಿದ್ವಾಂಸ, ಸಾಂಸ್ಥಿಕ ನಿರ್ಮಾತೃ ಮತ್ತು ಆಧುನಿಕ ಭಾರತದ ಶಿಲ್ಪಿಯನ್ನು ಸ್ಮರಿಸಬೇಕು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel