ದೇಶ

ಜೆಎನ್ ಯು ವಿವಿಯಲ್ಲಿ ಮತ್ತೊಂದು ವಿವಾದ: ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

Srinivas Rao BV

ನವದೆಹಲಿ: ಸದಾ ಒಂದಲ್ಲಾ ಒಂದು ವಿವಾದಗಳಿಗೆ ಸುದ್ದಿಯಾಗುವ ಜವಾಹರ್ ಲಾಲ್ ನೆಹರು ವಿವಿಯಲ್ಲಿ ಮತ್ತೊಂದು ವಿವಾದವಾಗಿದೆ. 

ಯೂನಿವರ್ಸಿಟಿಯಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. 

ನ.13 ರಂದು ರಾತ್ರಿ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತಿಮೆಯನ್ನು ವಿರೂಪಗೊಳಿಸುವುದಷ್ಟೇ ಅಲ್ಲದೇ ಅದರ ಸುತ್ತಲೂ ಆಕ್ಷೆಪಾರ್ಹ ಬರಹಗಳನ್ನು ಬರೆಯಲಾಗಿದೆ. 

ಘಟನೆಗೆ ಕಾರಣ ಯಾರು ಎಂಬುದು ಈ ವರೆಗೂ ತಿಳಿದುಬಂದಿಲ್ಲ. ಕಳೆದ ಕೆಲವು ದಿನಗಳಿಂದ ಜೆಎನ್ ಯು ವಿವಿ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು, ಇದಕ್ಕೂ ಈ ಘಟನೆಗೂ ಸಂಬಂಧವಿದೆಯಾ ಎಂಬ ದೃಷ್ಟಿಯಿಂದಲೂ ತನಿಖೆ ನಡೆಯುತ್ತಿದೆ.
 

SCROLL FOR NEXT