ಸರ್ವ ಪಕ್ಷ ಸಭೆ 
ದೇಶ

ನ.18 ರಿಂದ ಚಳಿಗಾಲದ ಅಧಿವೇಶನ: ಸುಗಮ ಕಲಾಪಕ್ಕೆ ಸ್ಪೀಕರ್ ಓಂ ಬಿರ್ಲಾ ಮನವಿ 

ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ನವದೆಹಲಿ: ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸ್ಪೀಕರ್ ರಾಜಕೀಯ ಸಲಹೆಗಾರರಿಗೆ ಮೊದಲು ವ್ಯವಹಾರ ಸಲಹಾ ಸಮಿತಿಯಲ್ಲಿ ಚರ್ಚಿಸಲು ಸಲಹೆ ನೀಡಿದರು. ಈ ಬಾರಿ ಗರಿಷ್ಠ ಸಂಖ್ಯೆಯ ಸಮಸ್ಯೆಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನವೆಂಬರ್ 18ರಿಂದ ಡಿಸೆಂಬರ್ 13ರವರೆಗೂ ಕಲಾಪ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ  ಅಧಿರ್ ರಂಜನ್, ಡಿಎಂಕೆಯ ಟಿಆರ್ ಬಾಲು, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ, ಬಿಎಸ್ಪಿಯ ಡ್ಯಾನಿಷ್ ಆಲಿ, ಎಲ್ ಜೆಪಿಯ ಚಿರಾಗ್ ಪಾಸ್ವನ್, ಶಿವಸೇನಾ ಮುಖಂಡ ವಿನಾಯಕ್ ರಾವತ್ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತಿತರರು ಸರ್ವ ಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದರು.

ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಬಿಜೆಪಿ ಸರ್ಕಾರದ ಅನೇಕ ಕಾಯ್ದೆಗಳು ಅನುಮೋದನೆಯಾಗುವ ಸಾಧ್ಯತೆ ಇದೆ.ಆರ್ಥಿಕ ಪ್ರಗತಿ ಕುಸಿತ, ಉದ್ಯೋಗ ಕೊರತೆ ಮತ್ತಿತರ ಸಮಸ್ಯೆಗಳನ್ನು ಎತ್ತುವ ಮೂಲಕ ಪ್ರತಿಪಕ್ಷಗಳು ಸರ್ಕಾರ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. 

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಸಹ ನಾಳೆ ಸರ್ವ ಪಕ್ಷ ಸಭೆ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT