ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ 
ದೇಶ

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ

ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ರಾಂಚಿ: ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆಯಿತು. ಲಾಲು ಯಾದವ್ ಅವರನ್ನು ಭೇಟಿಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಯಾದವ್, ಜಾರ್ಖಂಡ್ ನಲ್ಲಿ ಸರ್ಕಾರದ ನೆರಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ಖನಿಜ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಕೈಗಾರಿಕೆಗಳು ಸ್ಥಗಿತಗೊಂಡಿದ್ದು, ರೈತರು ಸಂಕಷ್ಟ ಸ್ಥಿತಿಗೆ ತಲುಪಿದ್ದಾರೆ ಎಂದರು.

ಜಾರ್ಖಂಡ್ ರಾಜ್ಯದ ಸ್ಥಿತಿ ಕರುಣಾಜನಕವಾಗಿದೆ. ಕಳೆದ ಹಲವು ದಶಕಗಳಲ್ಲಿ ಈ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ ಎಂದು ಶರದ್ ಯಾದವ್ ಹೇಳಿದ್ದಾರೆ. ಎನ್ ಡಿಎ ವಿಭಜನೆಯ ಬಗ್ಗೆ ಮಾತನಾಡಿದ ಅವರು, ವದಂತಿಗಳನ್ನು ಹರಡುವಲ್ಲಿ ಎನ್ ಡಿಎ ಜನರು ಚಾಣಾಕ್ಷರಾಗಿದ್ದಾರೆ. ಜಾರ್ಖಂಡ್ ನ ಜನರು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡಿದರು. ಆದರೆ ದುರದೃಷ್ಟವಶಾತ್ ಹೊರಗಿನವರನ್ನು ಮುಖ್ಯಮಂತ್ರಿಯಾಗಿ ಪಡೆದರು ಎಂದು ಹೇಳಿದರು. ಆರ್ ಜೆಡಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಶರದ್ ಯಾದವ್ ಸ್ಥಾನ ಪಡೆದಿದ್ದಾರೆ. ಯಾದವ್ ಅವರಲ್ಲದೆ ಹಿರಿಯ ಆರ್ ಜೆಡಿ ನಾಯಕ ರಾಮ್ ಬಾಬು ಯಾದವ್ ಮತ್ತು ಬಿಸ್ಕೊಮನ್ ಅಧ್ಯಕ್ಷ ಸುನಿಲ್ ಸಿಂಗ್ ಸಹ ಯಾದವ್ ಅವರನ್ನು ಭೇಟಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT