ಸಂಜಯ್ ರಾವತ್ 
ದೇಶ

ಶಿವಾಜಿ ಮಹಾರಾಜರು ಮಹಾರಾಷ್ಟ್ರದ 11 ಕೋಟಿ ಜನತೆಗೆ ಸೇರಿದವರು: ಶಿವಸೇನೆ 

ಛತ್ರಪತಿ ಶಿವಾಜಿ ಯಾವುದೇ ಒಂದು ಜಾತಿ ಅಥವಾ ಪಕ್ಷಕ್ಕೆ ಸೀಮಿತವಾದವರಲ್ಲ, ಅವರು ಮಹಾರಾಷ್ಟ್ರದ 11 ಕೋಟಿ ಜನರಿಗೆ ಸೇರಿದವರು ಎಂದು ಶಿವಸೇನೆ ಮತ್ತೊಮ್ಮೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ಮುಂಬೈ:ಛತ್ರಪತಿ ಶಿವಾಜಿ ಯಾವುದೇ ಒಂದು ಜಾತಿ ಅಥವಾ ಪಕ್ಷಕ್ಕೆ ಸೀಮಿತವಾದವರಲ್ಲ, ಅವರು ಮಹಾರಾಷ್ಟ್ರದ 11 ಕೋಟಿ ಜನರಿಗೆ ಸೇರಿದವರು ಎಂದು ಶಿವಸೇನೆ ಮತ್ತೊಮ್ಮೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ.


ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ತಮ್ಮ ವಾರದ ರೋಖೋಕ್ ಅಂಕಣದಲ್ಲಿ ರಾಜ್ಯಸಭಾ ಸದಸ್ಯ ಹಾಗೂ ವಕ್ತಾರ ಸಂಜಯ್ ರಾವತ್ ಈ ಕುರಿತು ಬರೆದಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ವಂಶ, ಪರಂಪರೆ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಚುನಾವಣಾ ಪ್ರಚಾರ ನಡೆಸಿತ್ತು. ತಮ್ಮ ಪಕ್ಷಕ್ಕೆ ಮಾತ್ರ ಶಿವಾಜಿ ಮಹಾರಾಜರ ಆಶೀರ್ವಾದವಿದೆ ಎಂಬರ್ಥದಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಉದಯನ್ ರಾಜೆ ಭೋಸ್ಲೆ ಸತಾರಾ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದಾರೆ.

ಇವರು ಛತ್ರಪತಿ ಶಿವಾಜಿ ಮಹಾರಾಜರ ವಂಶದವರು, ಇದು ಆ ವ್ಯಕ್ತಿಯ ಸೋಲು ಹೊರತು ಶಿವಾಜಿ ಮಹಾರಾಜರ ಪರಂಪರೆಯ ಸೋಲು ಅಲ್ಲ ಎಂದು ಬರೆದುಕೊಂಡಿದ್ದಾರೆ.


ಮಹಾರಾಷ್ಟ್ರದ ಜನತೆ ಸಿಟ್ಟು, ಆಕ್ರೋಶ ಮತ್ತು ಬೂಟಾಟಿಕೆಗಳನ್ನು ಸಹಿಸುವುದಿಲ್ಲ ಎಂದು ನಮಗೆ ಶಿವಾಜಿ ಮಹಾರಾಜರು ಹೇಳಿಕೊಟ್ಟಿದ್ದಾರೆ. ಶಿವಾಜಿ ಮಹಾರಾಜರ ಹೆಸರಿನಲ್ಲಿ ನಾಯಕರು ಪ್ರಮಾಣ ತೆಗೆದುಕೊಂಡ ನಂತರ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಿಲ್ಲ. ತಾವು ಈ ರಾಜ್ಯವನ್ನಾಳುವವರು ಎಂದು ಯೋಚಿಸುತ್ತಾರೆ. ಇದು ಅವರ ಅವನತಿಯನ್ನು ತೋರಿಸುತ್ತದೆ ಎಂದು ರಾವತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT