ಮನಮೋಹನ್ ಸಿಂಗ್ 
ದೇಶ

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿಸುವ ಪ್ರಕ್ರಿಯೆ ದೂರಗಾಮಿ ಹೆಜ್ಜೆ, ಇದಕ್ಕೆ ರಾಜ್ಯಸಭೆ ಸಲಹೆ ಬೇಕಿತ್ತು: ನಮೋ ಸರ್ಕಾರವನ್ನು ತಿವಿದ ಮನಮೋಹನ್ ಸಿಂಗ್

ರಾಜ್ಯವನ್ನು ವಿಭಜಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿರುವುದು ದೂರದೃಷ್ಟಿಯ ಹೆಜ್ಜೆಯಾಗಿದ್ದು ಇಂತಹಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಚರ್ಚಿಸಬೇಕಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. 

ನವದೆಹಲಿ: ರಾಜ್ಯವನ್ನು ವಿಭಜಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿರುವುದು ದೂರದೃಷ್ಟಿಯ ಹೆಜ್ಜೆಯಾಗಿದ್ದು ಇಂತಹಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಚರ್ಚಿಸಬೇಕಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

"ರಾಜ್ಯಗಳನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಪರಿವರ್ತಿಸುವುದು ಬಹುದೊಡ್ಡ ಪ್ರಸ್ತಾವನೆ ಮತ್ತು ಮಹತ್ವದ ಕಾನೂನಾಗಿರುತ್ತದೆ. ರಾಜ್ಯಗಳ ಪ್ರಾತಿನಿಧಿಕ ಮಂಡಳಿಯಾಗಿರುವ ಈ ರಾಜ್ಯಸಭೆಗೆ ಇಂತಹಾ ನಿರ್ಣಯ ತೆಗೆದುಕೊಳ್ಳುವ ಮುನ್ನ ತಿಳಿಸುವುದು ಮತ್ತು ಇಲ್ಲಿನ ಸದಸ್ಯರಿಗೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ನೀಡುವುದು ಅಗತ್ಯವಿದೆ. " ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

'ಉತ್ತುಂಗಕ್ಕೇರಿದ ಭಾವನಾತ್ಮಕ ವಾತಾವರಣದಲ್ಲಿ ಯಾವುದೇ ಕಾನೂನುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಮೇಲ್ಮನೆಯ ಕರ್ತವ್ಯ” ಅವರು ಹೇಳಿದ್ದಾರೆ.

ರಾಜ್ಯಸಭೆಯ ಕಾರ್ಯವೈಖರಿ ಸುಧಾರಣೆಗೆ ಹಲವು ಅಂಶಗಳನ್ನು ಸೂಚಿಸಿದ ಮನಮೋಹನ್ ಸಿಂಗ್ "ಸದಸ್ಯರು ಸಮಸ್ಯೆಗಳನ್ನು ಹೆಚ್ಚು ಆಳವಾಗಿ ಅಧ್ಯಯನ ಮಾಡಲು ಅನುವು ಮಾಡಿಕೊಡಲು ಸಾಕಷ್ಟು ಸಂಶೋಧನಾ ಸಿಬ್ಬಂದಿಗಳಂತಹ ಹೆಚ್ಚುವರಿ ಸಂಪನ್ಮೂಲಗಳನ್ನು ಪಡೆಯಬೇಕು" ಎಂದರು.

"ಪ್ರತಿ ವರ್ಷ ರಾಜ್ಯಸಭೆಯು ಕೇಂದ್ರ-ರಾಜ್ಯ ಸಂಬಂಧವನ್ನು ಚರ್ಚಿಸಲು ಸಮಯವನ್ನು ಕಂಡುಕೊಳ್ಳಬೇಕೆಂದು ನಾನು ಸೂಚಿಸುತ್ತೇನ. ಹಾಗೆಯೇ ರಾಷ್ಟ್ರದ ಆರೋಗ್ಯ ಮತ್ತು ಶಿಕ್ಷಣದ ಸ್ಥಿತಿಯ ಬಗ್ಗೆಯೂ ಚರ್ಚೆಗಳು ನಡೆಯಬೇಕು" ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT