ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: 'ಹೈ' ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 

ಸುಪ್ರೀಂಕೋರ್ಟ್'ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದಷ್ಟೇ ಶರದ್ ಅವರಿಂದ್ ಬೊಬ್ಡೆಯವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಕರಣ ಸಂಬಂಧ  ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ಅರ್ಜಿ ಕುರಿತು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. 
'
ಶುಕ್ರವಾರವಷ್ಟೇ ದೆಹಲಿ ಹೈಕೋರ್ಟ್ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರಕರಣ ಸಂಬಂಧ ಆಗಸ್ಟ್ ತಿಂಗಳಿನಲ್ಲಿ ಸಿಬಿಐ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಿತ್ತು. ಕಳೆದ ತಿಂಗಳು ಸುಪ್ರೀಂಕೋರ್ಟ್ ಇವರಿಗೆ ಜಾಮೀನು ನೀಡುವ ಮುನ್ನ ಜಾರಿ ನಿರ್ದೇಶನಾಯಲವು ಇವರನ್ನು ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಂಡಿತ್ತು. 

ಶುಕ್ರವಾರ ಜಾಮೀನು ಅರ್ಜಿ ತಳ್ಳಿಹಾಕಿದ್ದ ನ್ಯಾಯಾಲಯ, ಪ್ರಕರಣದಲ್ಲಿ ಚಿದಂಬರಂ ಅವರು ಸಕ್ರಿಯ ಹಾಗೂ ಪ್ರಮುಖ ಪಾತ್ರ ವಹಿಸಿದ್ದು, ಗಂಬೀರ ಸ್ವರೂಪದ ಪ್ರಕರಣ ಇದಾಗಿದೆ ಎಂದು ತಿಳಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT