ತಾಜ್ ಮಹಲ್ 
ದೇಶ

ಅಲಹಾಬಾದ್ ನಂತರ ಆಗ್ರಾ ಹೆಸರು ಬದಲಾವಣೆಗೆ ಮುಂದಾಗಿ ಯೋಗಿ ಸರ್ಕಾರ

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಲಹಾಬಾದ್ ನಂತರ ಈಗ ಪ್ರೇಮ ಸೌದ ತಾಜ್ ಮಹಲ್ ಇರುವ ಆಗ್ರಾದ ಹೆಸರು ಬದಲಾವಣೆಗೆ ಮುಂದಾಗಿದೆ.

ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಲಹಾಬಾದ್ ನಂತರ ಈಗ ಪ್ರೇಮ ಸೌದ ತಾಜ್ ಮಹಲ್ ಇರುವ ಆಗ್ರಾದ ಹೆಸರು ಬದಲಾವಣೆಗೆ ಮುಂದಾಗಿದೆ.

ಆಗ್ರಾ ಜಿಲ್ಲೆಯ ಹೆಸರನ್ನು ಆಗ್ರಾವನ ಎಂದು ಬದಲಿಸಲು ಯೋಗಿ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಉತ್ತರ ಪ್ರದೇಶಸರ್ಕಾರ ಅಂಬೇಡ್ಕರ್ ವಿಶ್ವವಿದ್ಯಾಲಯದ ಪರಿಣತರ ಸಲಹೆ ಕೇಳಿದೆ. 

ಆಗ್ರಾ ಹೆಸರು ಬದಲಾವಣೆ ಮಾಡುವಂತೆ ಆಗ್ರಾ ವಿಧಾನಸಭಾ ಕ್ಷೇತ್ರದ ಶಾಸಕ ಜಗನ್​ ಪ್ರತಾಪ್​ ಗಾರ್ಗ್​ ಅವರು ಆದಿತ್ಯ ನಾಥ್ ಅವರಿ​ಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆಗ್ರಾದಲ್ಲಿರುವ ಅಂಬೇಡ್ಕರ್ ವಿಶ್ವವಿದ್ಯಾಲಯಕ್ಕೆ ಆಗ್ರಾದ ಐತಿಹಾಸಿಕ ಹೆಸರಿನ ಕುರಿತು ಅಧ್ಯಯನ ನಡೆಸಿ ಸಲಹೆ ನೀಡಲು ಸೂಚನೆ ನೀಡಲಾಗಿದೆ.

ಆಗ್ರಾಕ್ಕೆ ಈ ಮೊದಲು ಆಗ್ರಾವನ ಎಂಬ ಹೆಸರಿತ್ತು ಎಂದು ನಂಬಲಾಗಿದೆ. ಹೀಗಾಗಿ ಜಿಲ್ಲೆಯ ಹಳೆಯ ಹೆಸರನ್ನೇ ಮರುನಾಮಕರಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಆಗ್ರಾವನದ ಹೆಸರು ಆಗ್ರಾ ಎಂದು ಯಾವಾಗ ಮತ್ತು ಏಕೆ ಬದಲಾಯಿತು ಎಂಬ ಸಂದರ್ಭ ಹಾಗೂ ಸಮಯದ ಕುರಿತು ತಿಳಿದುಕೊಳ್ಳಲು ಇತಿಹಾಸಕಾರರಿಗೆ ನಿರ್ದೇಶಿಸಲಾಗಿದೆ.

ಈ ಹಿಂದೆ ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್‌ ಅನ್ನು ಪ್ರಯಾಗ್‌ರಾಜ್ ಎಂದು ಹಾಗೂ ಐತಿಹಾಸಿಕ ಮುಘಲ್ ಸರಾಯ್ ರೈಲು ನಿಲ್ದಾಣಕ್ಕೆ ದೀನದಯಾಳ್ ಉಪಾಧ್ಯಾಯ ರೈಲು ನಿಲ್ದಾಣ ಎಂದು ಮರು ನಾಮಕರಣ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT