ಪ್ರಶಾಂತ್ ವೈಂದಮ್ 
ದೇಶ

ಅಕ್ರಮ ಪ್ರವೇಶ: ಇಬ್ಬರು ಭಾರತೀಯರನ್ನು ಬಂಧಿಸಿದ ಪಾಕಿಸ್ತಾನ ಪೊಲೀಸರು 

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಲ್ಪುರ್ ಜಿಲ್ಲೆಯ ಕೊಲಿಸ್ತಾನ್ ಮರುಭೂಮಿಯ ಗಡಿ ಮೂಲಕ ಪಾಕಿಸ್ತಾನವನ್ನು ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ಭಾರತೀಯರನ್ನು ಬಂಧಿಸಲಾಗಿದೆ.

ಹೈದರಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಲ್ಪುರ್ ಜಿಲ್ಲೆಯ ಕೊಲಿಸ್ತಾನ್ ಮರುಭೂಮಿಯ ಗಡಿ ಮೂಲಕ ಪಾಕಿಸ್ತಾನವನ್ನು ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ಭಾರತೀಯರನ್ನು ಬಂಧಿಸಲಾಗಿದೆ.


ಬಂಧಿತರಲ್ಲಿ ಒಬ್ಬರು ತೆಲಂಗಾಣ ಮೂಲದ ವಿ ಬಾಬುರಾವ್ ಅವರ ಪುತ್ರ ಸಾಫ್ಟ್ ವೇರ್ ಎಂಜಿನಿಯರ್ ಪ್ರಶಾಂತ್ ವೈಂದಮ್ ಮತ್ತು ಮಧ್ಯ ಪ್ರದೇಶದ ಸುಬಿ ಲಾಲ್ ಪುತ್ರ ದುರ್ಮಿ ಲಾಲ್ ಎಂದು ಗುರುತಿಸಲಾಗಿದೆ. 


ಪಾಕಿಸ್ತಾನ ಪೊಲೀಸರು ಇವರಿಬ್ಬರ ಮೇಲೆ ಎಫ್ಐಆರ್ ದಾಖಲಿಸಿದ್ದು ಪಾಕಿಸ್ತಾನ ಮಾಧ್ಯಮಗಳಿಗೆ ಎಫ್ಐಆರ್ ಪ್ರತಿ ಸಿಕ್ಕಿದೆ. ಕಳೆದ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಇವರು ಬಂಧಿತರಾಗಿದ್ದಾರೆ.


ಕೊಲಿಸ್ತಾನ್ ಗಡಿಯಲ್ಲಿ ಇಬ್ಬರು ವಿದೇಶಿಯರು ತಿರುಗಾಡುತ್ತಿದ್ದಾರೆ ಎಂದು ಮಾಹಿತಿ ಪಡೆದ ಪಾಕಿಸ್ತಾನ ಪೊಲೀಸರು ಅಲ್ಲಿಗೆ ಧಾವಿಸಿ ಅಲ್ಲಿ ಮರಳಿನ ದಿಬ್ಬದ ಹಿಂದೆ ಅವಿತು ಕುಳಿತಿದ್ದ ಈ ಭಾರತೀಯ ಯುವಕರನ್ನು ಬಂಧಿಸಿದ್ದಾರೆ.


ಪೊಲೀಸರು ಅವರ ಬಳಿ ಗುರುತು ಪತ್ರ ಮತ್ತು ಪಾಸ್ ಪೋರ್ಟ್ ಕೇಳಿದಾಗ ಅವರಲ್ಲಿ ಯಾವುದೂ ಇರಲಿಲ್ಲ ಎಂದು ತಿಳಿದುಬಂದಿದೆ.
ನಿನ್ನೆ ಬಿಡುಗಡೆಯಾದ ವಿಡಿಯೊದಲ್ಲಿ ಪ್ರಶಾಂತ್ ತನ್ನ ಪೋಷಕರನ್ನು ಉದ್ದೇಶಿಸಿ ತನ್ನನ್ನು ಜೈಲಿಗೆ ಕಳುಹಿಸಲಾಗಿದ್ದು ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡಬಹುದು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT