ದೇಶ

ಅಗತ್ಯಬಿದ್ದರೆ ಮಾತ್ರ ರಜನಿಕಾಂತ್ ಜೊತೆ ಕೈಜೋಡಿಸುತ್ತೇನೆ: ಕಮಲ್ ಹಾಸನ್

Lingaraj Badiger

ಚೆನ್ನೈ: ಅಗತ್ಯಬಿದ್ದರೆ ಮಾತ್ರ ರಾಜಕೀಯದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರೊಂದಿಗೆ ಕೈ ಜೋಡಿಸುವುದಾಗಿ ಮಕ್ಕಳ್ ನೀಧಿ ಮಯ್ಯಂ ಸಂಸ್ಥಾಪಕ, ನಟ ನಮಲ್ ಹಾಸನ್ ಅವರು ಹೇಳಿದ್ದಾರೆ.

ಕಾಲಿವುಡ್ ಸ್ಟಾರ್ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಇಬ್ಬರೂ ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ ತಾವು ಕೈ ಜೋಡಿಸಲು ಸಿದ್ಧ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಂತಸ ಮೂಡಿಸಿದ್ದಾರೆ.

ನನ್ನ ಸ್ನೇಹಿತ ರಜನಿಕಾಂತ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 44 ವರ್ಷಗಳಿಂದಲೂ ಚಿತ್ರರಂಗದಲ್ಲಿ ಜೊತೆಯಲ್ಲಿದ್ದೇವೆ. ನಾವು ರಾಜಕೀಯದಲ್ಲೂ ಒಂದಾದರೆ ಅದರಲ್ಲಿ ಆಶ್ಚರ್ಯ ಪಡುವ ವಿಷಯವೇನೂ ಇಲ್ಲ. ಒಂದು ವೇಳೆ ಅಗತ್ಯಬಿದ್ದರೆ ತಮಿಳುನಾಡಿನ ಅಭಿವೃದ್ದಿಗಾಗಿ ನಾವಿಬ್ಬರೂ ಒಂದಾಗುತ್ತೇವೆ ಎಂದು ಕಮಲ್ ಹಾಸನ್ ಅವರು ಹೇಳಿದ್ದಾರೆ.

ಇನ್ನು ಕಮಲ್ ಹಾಸನ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಸೂಪರ್​ಸ್ಟಾರ್ ರಜನಿಕಾಂತ್, ಸಂದರ್ಭ ಕೂಡಿಬಂದರೆ ರಾಜಕಾರಣದಲ್ಲಿ ಕಮಲ್ ಹಾಸನ್ ಜೊತೆ ಸೇರಲು ನಾನೂ ಸಿದ್ಧನಿದ್ದೇನೆ. ಇಬ್ಬರ ನಡುವೆಯೂ ಉತ್ತಮ ಬಾಂಧವ್ಯವಿದೆ. ಆ ಬಾಂಧವ್ಯ ರಾಜಕಾರಣದಲ್ಲೂ ಮುಂದುವರೆಯಲಿದೆ ಎಂದಿದ್ದಾರೆ.

SCROLL FOR NEXT